ಸುರಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನೆಯ ಯಾದಗಿರಿ ಜಿಲ್ಲಾ ಉಪ ಪ್ರಧಾನ ಸಂಚಾಲಕರಾಗಿ ನೇಮಕಗೊಂಡ ಮಾಳಪ್ಪ ಕಿರದಳ್ಳಿಯವರನ್ನು ನಗರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನವನ್ನು ಸ್ವೀಕರಿಸಿದ ಮಾಳಪ್ಪ ಕಿರದಳ್ಳಿ ಮಾತನಾಡಿ,ಸಂಘಟನೆಯಲ್ಲಿ ಇದುವರೆಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಸಮಿತಿಯ ಮುಖಂಡರು ದೊಡ್ಡ ಜವಬ್ದಾರಿಯನ್ನು ನೀಡಿದ್ದಾರೆ.ಅವರೆಲ್ಲರ ನಂಬಿಕೆಯನ್ನು ಹುಸಿಗೊಳಿಸದಂತೆ ಜಿಲ್ಲೆಯಲ್ಲಿನ ಎಲ್ಲಾ ದೀನ ದಲಿತ ಶೋಷಿತರ ಹಾಗು ಸಮಾಜದ ಏಳಿಗೆಗೆ ನಮ್ಮ ಮುಖಂಡರ ಮಾರ್ಗದರ್ಶನದಲ್ಲಿ ಸಂಘಟನೆಯನ್ನು ಬೆಳೆಸುವ ಜೊತೆಗೆ ಹೋರಾಟವನ್ನು ರೂಪಿಸುವುದಾಗಿ ತಿಳಿಸಿ,ತಾವೆಲ್ಲರು ಇದೇ ರೀತಿ ನಮ್ಮ ಹೋರಾಟಕ್ಕೆ ಸಹಕಾರ ನೀಡುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜು ಕುಂಬಾರ, ಡಾ: ಜಯಂತ ಪಾಟೀಲ್,ಮಹಾದೇವಪ್ಪ ಬೊಮ್ಮನಹಳ್ಳಿ,ಶ್ರೀಮಂತ ಚಲುವಾದಿ,ರವಿಕುಮಾರ ಸಾಹುಕಾರ,ಮಲ್ಲು ಸಜ್ಜನ ಸಗರ,ನಾಗರಾಜ ಸಾಹುಕಾರ, ಬಸವರಾಜ ಸಗರ ಸೇರಿದಂತೆ ಅನೇಕರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…