ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಕ್ಕೆ ತಹಸೀಲ್ದಾರ,ಡಿಡಿಪಿಐ, ಶಿಕ್ಷಣಾಧಿಕಾರಿ ಬೇಟಿ

ಶಹಾಬಾದ: ನಗರದಲ್ಲಿ ಗುರುವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನಡೆದ ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ ಸುರೇಶ ವರ್ಮಾ, ಚಿತ್ತಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯಸ್ವಾಮಿ ರುದ್ನೂರ, ಜಿಲ್ಲಾ ಉಪನಿರ್ದೇಶಕ ಅಶೋಕ ಭಜಂತ್ರಿ ಅವರು ಬೇಟಿ ನೀಡಿ ವೀಕ್ಷಣೆ ಮಾಡಿದರು.

ಶಹಾಬಾದ ತಾಲೂಕಿನಲ್ಲಿ ಗಂಗಮ್ಮ ಎಸ್. ಮರಗೋಳ, ಬಾಲ ವಿದ್ಯಾ ಮಂದಿರ, ಎಸ್.ಜಿ.ವರ್ಮಾ, ಬಸವ ಸಮಿತಿ, ಎಮ್‌ಸಿಸಿ ಹಾಗೂ ಭಂಕೂರ ಸರಕಾರಿ ಪ್ರೌಢಶಾಲೆಗಳಲ್ಲಿ ಪರೀಕ್ಷೆ ನಡೆದಿವೆ. ಆರು ಪರೀಕ್ಷಾ ಕೇಂದ್ರಗಳಿದ್ದು ಸುಮಾರು ೧೫೪೦ ಮಕ್ಕಳು ಪರೀಕ್ಷೆ ಬರೆದರು. ಪರೀಕ್ಷೆಯ ಕೊನೆಯ ದಿನವಾದ ಗುರುವಾರ ಎಲ್ಲಾ ಮಾಧ್ಯಮದ ೩ ಭಾಷಾ ವಿ?ಯಗಳ ಪರೀಕ್ಷೆಗಳು ಶಾಂತಿಯುತವಾಗಿ ಜರುಗಿತು.
ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ ಸುರೇಶ ವರ್ಮಾ, ಚಿತ್ತಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯಸ್ವಾಮಿ ರುದ್ನೂರ, ಡಿಡಿಪಿಐ ಭಜಂತ್ರಿ ಅವರು ಬೇಟಿ ನೀಡಿ ಪರಿಶೀಲಿಸಿದರು.

ಅಲ್ಲದೇ ಕೆಲವು ವಿದ್ಯಾರ್ಥಿಗಳು ಮಾಸ್ಕ್ ಧರಿಸದಿರುವುದನ್ನು ಕಂಡು ಪರೀಕ್ಷಾ ಮೇಲ್ವಿಚಾರಕರನ್ನು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳಿಗೆ ಮಾಸ್ಕ್ ಮೂಗಿನ ಕೆಳಗಡೆ ಹಾಕದೇ ಮೂಗಿನ ಮೇಲೆ ಹಾಕಿಕೊಂಡು ಪರೀಕ್ಷೆಗೆ ಬರೆಯಿರಿ.ಯಾವುದೇ ಭಯ ಬೇಡ.ಧೈರ್ಯದಿಂದ ಎದುರಿಸಿ ಎಂದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಶಿವಪುತ್ರ ಕರಣಿಕ್ ಪರೀಕ್ಷಾ ಕೇಂದ್ರದ ಎಲ್ಲಾ ಶಿಕ್ಷಕರಿಗೆ, ಆಶಾ ಕಾರ್ಯಕರ್ತರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದರು.

ಪ್ರಾರಂಭದಲ್ಲಿ ಮುಖ್ಯಗೇಟನಲ್ಲೇ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿ ಮಾಸ್ಕ್ ನೀಡಿ ಪರೀಕ್ಷಾ ಕೇಂದ್ರದ ಒಳಗೆ ಕಳುಹಿಸಲಾಗಿತ್ತು.
ಸ್ಕೌಟ್ಸ್ ಮತ್ತು ಗೈಡ್ಸ್‌ನ ಸಾವಿತ್ರಿ ಪಾಟೀಲ, ಲಲಿತಾ, ಜಗನ್ನಾಥ, ವೆಂಕಟೇಶ ಚಿನ್ನೂರ್,ಶಿವಯೋಗಿ ಕಟ್ಟಿ, ಎಸ್.ಬಿ.ಪಾಟೀಲ, ವಿಶ್ವಾನಾಥ ಹೂಗಾರ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಜೀವನದಲ್ಲಿ ಸವಾರ್ಂಗೀಣ ಸ್ವಾಸ್ಥ್ಯ ಸಾಧಿಸಲು ಭಾರತೀಯ ಜ್ಞಾನ ವ್ಯವಸ್ಥೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ

ಕಲಬುರಗಿ; ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯು ಜೀವನದಲ್ಲಿ ಸವಾರ್ಂಗೀಣ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಸಾಧಿಸಲು ಎಲ್ಲಾ ಸಮಸ್ಯೆಗಳಿಗೆ ಉತ್ತರ ಮತ್ತು…

5 mins ago

ಕಾವ್ಯ ದೊಂಬರಾಟವಲ್ಲ: ಕಾವ್ಯ ಸಂಸ್ಕೃತಿ ಯಾನಕ್ಕೆ ಚಾಲನೆ

ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.‌ಬಸವರಾಜ ಸಾದರ ಅಭಿಪ್ರಾಯ…

56 mins ago

ಕೋಲಿ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…

3 hours ago

ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…

4 hours ago

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

5 hours ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420