ದೇವರಗೋನಾಲ ಕ್ರೀಡಾ ಮೈದಾನಕ್ಕೆ ಜಿಪಂ ಸಿಇಒ ಶಿಕ್ಷಣ ಇಲಾಖೆ ಕಮಿಷನರ್ ಭೇಟಿ

0
14

ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನೂತನವಾಗಿ ನಿರ್ಮಿಸಲಾಗುತ್ತಿರುವ ಕ್ರೀಡಾ ಮೈದಾನಕ್ಕೆ ಯಾದಗಿರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಹಾಗು ಶಿಕ್ಷಣ ಇಲಾಖೆಯ ಕಲಬುರ್ಗಿ ವಿಭಾಗಿಯ ಆಯುಕ್ತರಾದ ನಳಿನಕುಮಾರ ಅತುಲ್ ಅವರು ಗುರುವಾರ ಮದ್ಹ್ಯಾನ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗು ಪಿಡಿಒ ಅವರು ಸಿಇಒ ಶಿಲ್ಪಾ ಶರ್ಮಾ ಅವರಿಗೆ ಕೈಗೊಂಡ ಕಾಮಗಾರಿಗಳನ್ನು ತೋರಿಸುವ ಜೊತೆಗೆ ಇನ್ನೂ ಆಗಬೇಕಾದ ಕಾಮಗಾರಿಗಳ ಬೇಡಿಕೆಯನ್ನು ಸಲ್ಲಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಾತನಾಡಿದ ಸಿಇಒ,ಉದ್ಯೋಗ ಖಾತ್ರಿ ಯೋಜನೆಯಡಿ ಉತ್ತಮವಾಗಿ ಕೆಲಸ ಮಾಡುತ್ತಿರುವಿರಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು ಜೊತೆಗೆ ಜಿಲ್ಲಾ ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ದೇವರಗೋನಾಲದಲ್ಲಿ ಬಾಸ್ಕೆಟ್ ಬಾಲ್ ಮೈದಾನವನ್ನು ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.ಅಲ್ಲದೆ ಮೈದಾನದ ಬಳಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಆಯುಕ್ತ ನಳಿನ್ ಕುಮಾರ ಅತುಲ್ ಅವರು ಮಾತನಾಡಿ,ಸ್ಥಳಿಯ ಎಸ್‌ಡಿಎಮ್‌ಸಿಗೂ ಸರಕಾರದ ಅನುದಾನವಿದೆ ಅದನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು.ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ರಾಜ್ಯ ನಿರ್ದೇಶಕ ಬಸವರಾಜ ಗೌನಳ್ಳಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮೂಡಲದಿನ್ನಿ,ಜಿಲ್ಲಾ ಪಂಚಾಯತಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೂಗರಡ್ಡಿ, ಸ್ಥಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮಣ್ಣ ದೀವಳಗುಡ್ಡ,ಸದಸ್ಯ ಹಣಮಂತ್ರಾಯಗೌಡ, ಗ್ರಾಮ ಪಂಚಾಯತಿ ಅಭೀವೃಧ್ಧಿ ಅಧಿಕಾರಿ ರವಿಚಂದ್ರ ರಡ್ಡಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here