ಬಿಸಿ ಬಿಸಿ ಸುದ್ದಿ

ಕಲಬುರಗಿ ನಗರಕ್ಕೆ ನಿರಂತರ ಕುಡಿಯುವ‌ ನೀರು ಒದಗಿಸುವ ಯೋಜನೆಗೆ ರೂ 750 ಕೋಟಿ‌ ಬಿಡುಗಡೆ: ಖಾದರ್

ಕಲಬುರಗಿ: ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಯೋಜನೆಯೊಂದನ್ನು ರೂಪಿಸಲಾಗಿದ್ದು ಇದಕ್ಕಾಗಿ ರೂ 750 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ನಗರಾಭಿವೃದ್ದಿ ಸಚಿವರಾದ ಶ್ರೀ ಯು.ಟಿ.ಖಾದರ್ ಹೇಳಿದರು.

ನಗರಸಭೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ‌ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅವಾಹಲು ಸ್ವೀಕರಿಸಿದ ನಂತರ ಅವರು ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಕಲಬುರಗಿ ನಗರ ವೇಗವಾಗಿ ಬೆಳೆಯುತ್ತಿದ್ದು ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಲಭ್ಯ ಒದಗಿಸುವುದು ಅದರಲ್ಲೂ ಕುಡಿಯುವ ನೀರು ಒದಗಿಸುವುದು ಪ್ರಮುಖವಾಗಿದೆ.‌ ನಿರಂತರ ಕುಡಿಯುವ ನೀರು ಒದಗಿಸುವ ಯೋಜನೆಗಾಗಿ ರೂ 750 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ನೀರಿನ ಎಲ್ಲ ರೀತಿಯ ಮೂಲಗಳಿಂದ ನೀರನ್ನು‌ ತೆಗೆದುಕೊಂಡು ಸರಬರಾಜು ಮಾಡುವ ಯೋಜನೆ ಇದಾಗಿದ್ದು ಮೂರು ತಿಂಗಳ ಒಳಗಾಗಿ ಯೋಜನೆಗೆ ಚಾಲನೆ ದೊರಕಲಿದ್ದು ಮುಂದಿನ ಐದು ವರ್ಷಗಳಲ್ಲಿ ಸಂಪೂರ್ಣಗೊಳಿಸಲಾಗುವುದು ಎಂದರು. ಈ ಯೋಜನೆಯನ್ನು ಹೊರತುಪಡಿಸಿ ಅಮೃತ ಯೋಜನೆಯಡಿಯಲ್ಲಿ ರೂ 140 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಕುಡಿಯುವ ನೀರಿನ ಪೈಪ್ ಲೈಲ್ ಗಳನ್ನು ಅಳವಡಿಸಲಾಗುವುದು ಎಂದರು.

ಹತ್ತು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ರಾಜ್ಯದ 10 ನಗರಗಳಲ್ಲಿ ವೈಜ್ಞಾನಿಕ ನಾಲಾಗಳ ಅಭಿವೃದ್ದಿಗೆ ಹಾಗೂ ಸಮರ್ಪಕ ಯುಜಿಡಿ ವ್ಯವಸ್ಥೆ ಜಾರಿಗೊಳಿಸಲು ಪ್ರತಿ ಜಿಲ್ಲೆಗೆ ರೂ 150 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಲಬುರಗಿ ನಗರ ಸ್ಮಾರ್ಟ್ ಸಿಟಿಗೆ ಆಯ್ಕೆಯಾದಗಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಖಾದರ್ ಅವರು ಕೇಂದ್ರ ಸರಕಾರ ಸ್ಮಾರ್ಟ್ ಸಿಟಿ‌ ಘೋಷಣೆಗೆ ಕೆಲವು‌ ನಿಯಮಾವಳಿಯನ್ನು‌ ರೂಪಿಸಿದೆ. ಮೊದಲ ಹಂತದಲ್ಲಿ ಕೆಲ ನಗರಗಳು ಹಾಗೂ ಎರಡನೆಯ ಹಂತದಲ್ಲಿ ಮತ್ತೆ ಕೆಲ ನಗರಗಳನ್ನು ಸ್ಮಾರ್ಟ್ ಸಿಟಿಗಳನ್ನಾಗಿ‌ ಘೋಷಿಸಿದೆ. ಆದರೆ,‌ ಈ ಸಲ ಮತ್ತೊಮ್ಮೆ ಶಿಫಾರಸ್ಸು ಮಾಡಲಾಗುವುದು ಎಂದರು. ಸ್ಮಾರ್ಟ್ ಸಿಟಿ‌ ಯೋಜನೆಯಡಿಯಲ್ಲಿ ಕೇಂದ್ರ ರೂ 100 ಕೋಟಿ‌‌ ಬಿಡುಗಡೆ ಮಾಡಿದರೆ ರಾಜ್ಯ ಸರಕಾರ ರೂ150 ಕೋಟಿ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ನಗರದ ಸಮರ್ಪಕ ಅಭಿವೃದ್ದಿಗೆ ಸಹಕಾರಿಯಾಗುವ ಯೋಜನೆಗಳನ್ನು ರೂಪಿಸಲಾಗುವುದು ಎಂದರು.

ನಗರದ ಅಕ್ರಮ ಜಾಗ ಒತ್ತುವರಿಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಅಕ್ರಮ ಒತ್ತುವರಿ ಕುರಿತು ಸಮೀಕ್ಷೆ ಮಾಡಲಾಗುವುದು. ಜೊತೆಗೆ ಸರಕಾರದ‌ ಮಾನದಂಡಗಳ ಬಗ್ಗೆ ಚರ್ಚೆ ಮಾಡಿ ಅಕ್ರಮ ಅತಿಕ್ರಮಣ ಎಂದು ಯಾವ ಜಾಗವನ್ನು ಕರೆಯಬಹುದು ಹಾಗೂ ಹಾಗೆ ಅಕ್ರಮ ಎಂದು ಗುರುತಿಸುವ ಜಾಗಗಳನ್ನು ಯಾವ ರೀತಿ ತೆರವುಗೊಳಿಸಬೇಕು ಎನ್ನುವುದರ ಕುರಿತು‌ ನಿರ್ಧಾರ ತೆಗೆದಿಕೊಳ್ಳಲಾಗುವುದು.‌ ಇದಕ್ಕೆ ಕನಿಷ್ಟ ನಾಲ್ಕು ವಾರಗಳ ಸಮಯ ಬೇಕಾಗುತ್ತದೆ. ಹಾಗಾಗಿ ಮಾನ್ಯ ನಗರಾಭಿವೃದ್ದಿ ಸಚಿವರು ಆದೇಶ ಹೊರಡಿಸಿದರೆ‌ ಈ ಕ್ರಮ ಚಾಲನೆ ನೀಡಲಾಗುವುದು ಎಂದರು.

ತೀರಾ ಇತ್ತೀಚಿಗೆ ಅಕ್ರಮ ಒತ್ತುವರಿ ಜಾಗವೊಂದನ್ನು ತೆರವುಗೊಳಿಸಲು ಪಾಲಿಕೆ ಅಧಿಕಾರಿಗಳು ಮುಂದಾದಾಗ ರಾಜಕೀಯ ಒತ್ತಡ ತಂದು ಅಂದಿನ ಪ್ರಕ್ರಿಯೆಯನ್ನು ಮುಂದೂಡಿಸಿ‌ ನಂತರ ಒತ್ತುವರಿದಾರರು‌ ಕೋರ್ಟ್ಗೆ ಹೋದ ವಿಚಾರವನ್ನು ಪ್ರಸ್ತಾಪಿಸಿದ ಪ್ರಿಯಾಂಕ್ ಖರ್ಗೆ ಅವರು ಅಕ್ರಮ ಜಾಗಗಳ ಒತ್ತುವರಿ ತೆರವುಗೊಳಿಸಲು ಸ್ಥಳೀಯ ಮಟ್ಟದಲ್ಲಿ ಶಾಸಕರು ಸೇರಿದಂತೆ ಜನಪ್ರತಿನಿಧಿಗಳ, ಸಾರ್ವಜನಿಕರ ಹಾಗೂ ಮಾಧ್ಯಮದ ಸಹಕಾರ ಬೇಕಾಗುತ್ತದೆ ಅಂದಾಗ ಮಾತ್ರ ಇಂತಹ ಪ್ರಮುಖ ಕಾರ್ಯಕ್ರಮಗಳನ್ನು ಸುಲಭವಾಗಿ ಕೈಗೆತ್ತಿಕೊಳ್ಳಬಹುದು ಎಂದರು.

ಜಿಲ್ಲೆಯಲ್ಲಿ ಪ್ರಮುಖ ಸರಕಾರ ಇಲಾಖೆಗಳ ಹುದ್ದೆಗಳು ಖಾಲಿಯಿರುವುದನ್ನು ಪ್ರಸ್ತಾಪಿಸಿ‌ ಸಚಿವರು
ವಿವಿಧ ಇಲಾಖೆಗಳಲ್ಲಿ 76 ಕ್ಕೂ ಅಧಿಕ ಪ್ರಮುಖ ಹುದ್ದೆಗಳು ಖಾಲಿಯಿವೆ.‌ ಈ ಹುದ್ದೆಗಳನ್ನು ತುಂಬಲು ಹಾಗೂ ಹಾಗೆ ನೇಮಕವಾದ ಅಧಿಕಾರಿಗಳನ್ನು ಹೈಕ ಭಾಗದಲ್ಲಿ ಕಡ್ಡಾಯವಾಗಿ 10 ವರ್ಷ ಸೇವೆ ಸಲ್ಲಿಸುವಂತೆ ನಿಯಮಾವಳಿ ರೂಪಿಸಲು ಸಿಎಂ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸ್ಪಂದಿಸಿದರುವ ಸಿಎಂ ಅವರು ಆದೇಶ ಮಾಡಿದ್ದಾರೆ ಎಂದು ನಗರಾಭಿವೃದ್ದಿ ಸಚಿವರ ಗಮನಕ್ಕೆ ತಂದರು.

ಸಭೆಯಲ್ಲಿ ಶಾಸಕರಾದ ಅಪ್ಪುಗೌಡ ಪಾಟೀಲ್, ಬಸವರಾಜ ಮತ್ತಿಮೂಡ, ಬಿ.ಜಿ.ಪಾಟೀಲ್, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ನಗರಾಭಿವೃದ್ದಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್, ಕಮೀಷನರ್ ಫೌಜಿಯಾ ತರನ್ನುಮ್ ಸೇರಿದಂತೆ ಅಧಿಕಾರಿಗಳು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago