ಬಿಸಿ ಬಿಸಿ ಸುದ್ದಿ

ಖರ್ಗೆ ಸೋಲು ವೈಯಕ್ತಿಕ ಸೋಲಲ್ಲ ಅದು ಶೋಷಿತರ ಸೋಲು: ಸಚಿವ ಯು.ಟಿ.ಖಾದರ್

ಕಲಬುರಗಿ: ಹಿರಿಯ ನಾಯಕರಾದ‌ ಶ್ರೀ‌ ಮಲ್ಲಿಕಾರ್ಜುನ‌ ಖರ್ಗೆ ಅವರ ಸೋಲು ಅದು ಕೇವಲ ವೈಯಕ್ತಿಕ ಸೋಲಲ್ಲ ಬದಲಿಗೆ ಶೋಷಿತರ ಹಾಗೂ ‌ಹಿಂದುಳಿದವರ ಸೋಲಾಗಿದೆ‌ ಎಂದು‌ ನಗರಾಭಿವೃದ್ದಿ‌ ಸಚಿವರಾ‌ದ‌ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.

ಜಿಲ್ಲಾ‌ ಕಾಂಗ್ರೇಸ್ ಕಮಿಟಿ ಏರ್ಪಡಿಸಲಾಗಿದ್ದ ಚಿಂತನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಲೋಕಸಭೆಯಲ್ಲಿ ನಾವು‌ ಸೋತಿದ್ದೇವೆ ಆದರೆ‌ ಈ ಸೋಲು ಕೊನೆಯಲ್ಲ. ನಾವು ಬಲಿಷ್ಠರಾಗಬೇಕಾದರೆ  ಹೋರಾಟ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡಬೇಕಾಗಿದೆ. ಆ ಕೆಲಸ ಇಂದಿನಿಂದಲೇ ಪ್ರಾರಂಭವಾಗಬೇಕಿದ್ದು ನಿಮ್ಮೆಲ್ಲರ ಪ್ರಾಮಾಣಿಕ ಪ್ರಯತ್ನ ಹಾಗೂ ತ್ಯಾಗದಿಂದ ಸಾಧ್ಯವಾಗಲಿದ್ದು ಮುಂದಿನ‌ ದಿನಗಳಲ್ಲಿ ನಾವು ಮತ್ತೆ ಪ್ರಬಲವಾಗಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಬೂತ್ ಮಟ್ಟದಿಂದಲೇ ಪಕ್ಷ ಕಟ್ಟಬೇಕು. ನಿಮ್ಮ ಈ ಪ್ರಯತ್ನ ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದು ಕರೆ ನೀಡಿದ ಸಚಿವರು, ಕಾಂಗ್ರೇಸ್ ಈ‌ ಹಿಂದೆ ಕೇಂದ್ರದಲ್ಲಿ‌ ಸೋತಿದ್ದರೂ ಕೂಡಾ ಮತ್ತೆ ಪ್ರಬಲವಾಗಿ ಬೆಳೆದಿತ್ತು ಅದಕ್ಕೆ‌ ಕಾರಣ ನಿಷ್ಠಾವಂತ ಕಾರ್ಯಕರ್ತರ ಹೋರಾಟದ ಫಲ ಎಂದು ಹೇಳಿದರು.

ಬಿಜೆಪಿಯವರು ಏನೇ ಗೊಂದಲ ಸೃಷ್ಠಿಸಿದರೂ ಕೂಡಾ ರಾಜ್ಯದ ಸಮ್ಮಿಶ್ರ ಸರಕಾರ‌ ಗಟ್ಟಿಯಾಗಿದ್ದು ಜನಪರ‌ ಕೆಲಸ ಮಾಡಿಕೊಂಡು ಹೋಗುತ್ತದೆ ಎಂದು ಒತ್ತಿ ಹೇಳಿದ ಸಚಿವ ಖಾದರ್ ಅವರು ಕೇಂದ್ರ ಸರಕಾರದ ವಿರುದ್ದ ಹೋರಾಟ ಮಾಡಲು‌ ನೀವು ಸತತ ಪ್ರಯತ್ನ ಮಾಡಬೇಕು. ಹಾಗಾಗಿ‌ ನಿಮ್ಮ ಮಧ್ಯೆ ಏನಾದರೂ ಮುನಿಸು, ಭಿನ್ನಾಭಿಪ್ರಾಯ ಇದ್ದರೆ ಅದನ್ನು ಬದಿಗೊತ್ತಿ‌ ಪಕ್ಷ ಸಂಘಟನೆಗೆ ಯುದ್ದೋಪಾದಿಯಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸೀಟುಗಳನ್ನು ಗೆಲ್ಲಲು ಸಹಕರಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಸಮಾಜಕಲ್ಯಾಣ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಜಿಲ್ಲಾಧ್ಯಕ್ಷರಾದ ಜಗದೇವ ಗುತ್ತೇದಾರ, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು , ಶಿವಾನಂದ್ ಪಾಟೀಲ್ ಸೇರಿದಂತೆ ಮತ್ತಿತರಿದ್ದರು.

emedialine

Recent Posts

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

60 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

20 hours ago