ಬಿಸಿ ಬಿಸಿ ಸುದ್ದಿ

ಪ್ರವಾಹ ಭೀತಿ ನದಿ ಪಾತ್ರದ ಗ್ರಾಮಗಳಿಗೆ ತಹಸೀಲ್ದಾರ್ ಭೇಟಿ

೨೩೦೭ ಸುರಪುರ ೦೧
ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ನದಿ ಪಾತ್ರದ ಗ್ರಾಮಗಳಿಗೆ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಭೇಟಿ ನೀಡಿ ಜನರಿಗೆ ಎಚ್ಚರಿಕೆ ನೀಡಿದರು.

ಸುರಪುರ: ಕೃಷ್ಣಾ ನದಿಗೆ ದಿನೆ ದಿನೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿರುವುದರಿಂದ ನದಿ ಪಾತ್ರಾದ ಗ್ರಾಮಗಳಲ್ಲಿನ ಜನರಲ್ಲಿ ಪ್ರವಾಹದ ಭೀತಿ ಹೆಚ್ಚುತ್ತಿದೆ.ಆದ್ದರಿಂದ ಪರಸ್ಥಿತಿಯನ್ನು ಅರಿಯಲು ಸ್ವತಃ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಶುಕ್ರವಾರ ಮುಂಜಾನೆ ತಾಲೂಕಿನ ನೀಲಕಂಠರಾಯನಗಡ್ಡಿಗೆ ಭೇಟಿ ನೀಡಿದ ತಹಸೀಲ್ದಾರರು ಅಲ್ಲಿಯ ಜನರೊಂದಿಗೆ ಸಮಾಲೋಚನೆ ನಡೆಸಿದರು.ನದಿಗೆ ಈಗ ೨ ಲಕ್ಷ ಕ್ಯೂಸೆಕ್‌ಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ.ಇನ್ನೂ ಹೆಚ್ಚಾಗಬಹುದು,ಆದ್ದರಿಂದ ತಾವೆಲ್ಲರು ಸುರಕ್ಷಿತ ಸ್ಥಳಕ್ಕೆ ತೆರಳುವುದಾದರೆ ಎಲ್ಲಾ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು.ಆದರೆ ನೀಲಕಂಠರಾಯನಗಡ್ಡಿಯ ಜನರು ಸದ್ಯ ಇನ್ನೂ ಹೆಚ್ಚಿನ ನೀರು ಬರದಿರುವುದರಿಂದ ನಮಗೆ ಏನು ತೊಂದರೆ ಇಲ್ಲ ಇಲ್ಲೆ ಇರುವುದಾಗಿ ತಿಳಿಸಿದರು.

ಅಲ್ಲದೆ ಹಾಗೇನಾದರು ನಮಗೆ ಅಪಾಯ ಎನಿಸಿದಲ್ಲಿ ನಾವು ತಿಳಿಸುತ್ತೇವೆ ಆಗ ಇಲ್ಲಿಂದ ಬರುವುದಾಗಿ ಜನರು ತಿಳಿಸಿದರು.

ಅದೇರೀತಿಯಾಗಿ ನದಿ ಪಾತ್ರದ ಗ್ರಾಮಗಳಾದ ತಿಂಥಣಿ ಶೆಳ್ಳಗಿ ಮತ್ತಿತರೆ ಗ್ರಾಮಗಳಿಗೆ ತಹಸೀಲ್ದಾರರು ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸಿದರು.ಯಾವುದೇ ಕಾರಣಕ್ಕೂ ಜನರು ನದಿ ಕಡೆಗೆ ಹೋಗದಂತೆ ಎಚ್ಚರಿಕೆಯನ್ನು ನೀಡುವ ಜೊತೆಗೆ ತಿಂಥಣಿ ಗ್ರಾಮದಲ್ಲಿ ಮೌನೇಶ್ವರ ದೇವಸ್ಥಾನದ ಮುಂಬಾಗದಿಂದ ನದಿಗೆ ಹೋಗುವ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಿಸುವ ಮೂಲಕ ಜನರು ಮತ್ತು ಜಾನುವಾರುಗಳು ನದಿ ಕಡೆಗೆ ಹೋಗದಂತೆ ಕ್ರಮ ಕೈಗೊಳ್ಳಲಾಗಿದೆ.

emedialine

Recent Posts

ಅಭಿವೃಧ್ಧಿಗಾಗಿ ಶ್ರಮಿಸಿದ ಎಲ್ಲರಿಗೂ ನನ್ನ ಸೆಲ್ಯೂಟ್: ಶಾಸಕ ಆರ್.ವಿ ನಾಯಕ

ಸುರಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದವರಲ್ಲಿ ನಮ್ಮ ಸುರಪುರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಸೇರಿ ಎಲ್ಲಾ ಹೋರಾಟಗಾರರಿಗೆ ಹಾಗೂ…

6 hours ago

ಫೋಟೋ ಜರ್ನಲ್ ಲಿಸ್ಟ್ ಶಿವಶರಣ ಬೆಣ್ಣೂರ್ ಗೆ ಜಿಲ್ಲಾಡಳಿತದಿಂದ ಸನ್ಮಾನ

ಕಲಬುರಗಿ: ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಏರ್ಪಡಿಸಿದ ಛಾಯಾಚಿತ್ರ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ವಿಶೇಷ ಪ್ರಶಸ್ತಿ ಪಡೆದ ವಿಜಯ…

6 hours ago

ಜೈಭಾರತ ಮಾತಾ ಸೇವಾ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಆಳಂದ: ತಾಲೂಕಿನ ಲಾಡ ಚಿಂಚೊಳಿಯ ಭಾರತ ಮಾತಾ ಮಂದಿರದಲ್ಲಿ ಜೈಭಾರತ ಮಾತಾ ಸೇವಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ್ಯೋತ್ಸವ…

6 hours ago

ಸುರಪುರ:ತಾಲೂಕಿನ ವಿವಿಧ ಕಡೆಗಳಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಸುರಪುರ:ತಾಲೂಕಿನಾದ್ಯಂತ ವಿವಿಧ ಕಡೆಗಳಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ದಿಂದ ಆಚರಿಸಲಾಗಿದೆ. ನಗರದ ಕಾಂಗ್ರೆಸ್ ಕಚೇರಿ ವಸಂತ ಮಹಲ್,ಮಹಾತ್ಮ ಗಾಂಧಿ…

6 hours ago

ಶಶೀಲ್ ನಮೋಶಿಯ ಅಧ್ಯಕ್ಷತೆಯಲ್ಲಿ ಬಸವೇಶ್ವರ ಆಸ್ಪತ್ರೆ ಬದಲಾವಣೆ ಕಂಡಿದೆ: ಪೂಜ್ಯ ಷ ಬ್ರ ಗಂಗಾದರಯ್ಯ ಮಹಾಸ್ವಾಮೀಜಿ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪ್ರತಿಷ್ಟಿತ ಬಸವೇಶ್ವರ ಭೊದನಾ ಮತ್ತು ಸಾರ್ವಜನಿಕ ಆಸ್ಪತ್ರೆಯ ಅತಿಕಡಿಮೆ ಬೆಲೆಯಲ್ಲಿ ತಯಾರದ ಇತರ…

6 hours ago

ಜೇವರ್ಗಿ: 42 ವಿಕಲಚೇತನರಿಗೆ ಮೋಟಾರೀಕೃತ ಟ್ರೈಸೈಕಲ್‌ಗಳ ವಿತರಣೆ

ಜೇವರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರು, ಜೇವರ್ಗಿ ಶಾಸಕರಾದ ಡಾ. ಅಜಯ್‌ ಧರ್ಮಸಿಂಗ್‌ ಅವರು ಗುರುವಾರ ಜೇವರ್ಗಿಯ ತಾಲೂಕು…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420