ಆಳಂದ: ಪಟ್ಟಣದ ಪ್ರತಿಷ್ಠಿತ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ವತಂತ್ರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜಿನ ವಿದ್ಯಾರ್ಥಿನಿ ಕಲ್ಪನಾ ಶ್ರೀಮಂತ ಚನ್ನಗೊಂಡ ಶೇ. ೯೯.೧೬ ಅಂಕ ಪಡೆಯುವುದರೊಂದಿಗೆ ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ಕಾಲೇಜಿಗೆ ಶೇ. ೧೦೦% ರಷ್ಟು ಫಲಿತಾಂಶ ಲಭ್ಯವಾಗಿದೆ. ಈ ಬಾರಿಯ ಫಲಿತಾಂಶವು ಎಸ್ಎಸ್ಎಲ್ಸಿ. ಪ್ರಥಮ ಪಿಯು ಅಂಕಗಳು ಹಾಗೂ ಕೋವಿಡ್ ೧೦ % ಅಂಕಗಳೊಂದಿಗೆ ಪ್ರಕಟಗೊಂಡಿದೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಸಕರೂ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಸುಭಾಷ್ ಆರ್ ಗುತ್ತೇದಾರ, ಸಂಸ್ಥೆಯ ಕಾರ್ಯದರ್ಶಿಗಳಾದ ಹರ್ಷಾನಂದ ಗುತ್ತೇದಾರ, ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ. ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ ಸೇರಿದಂತೆ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.
ಬಾಕ್ಸ್: ಬಹಳ ಸಂತೋಷವಾಗುತ್ತಿದೆ ಪರೀಕ್ಷೆ ಜರುಗಿದರೂ ಇಷ್ಟು ಅಂಕ ಪಡೆಯುತ್ತೆನೆಂಬ ಭರವಸೆಯಿತ್ತು. ನನ್ನ ಈ ಸಾಧನೆಯಲ್ಲಿ ಶಿಕ್ಷಣ ಸಂಸ್ಥೆಯ ಪಾತ್ರ ಪ್ರಮುಖವಾಗಿದೆ. ನಾನು ಒಂದನೇ ತರಗತಿಯಿಂದ ಪಿಯುವರೆಗೂ ಇಲ್ಲೇ ಓದಿದ್ದೇನೆ. ಶಿಕ್ಷಕರ, ಉಪನ್ಯಾಸಕರ, ಸಂಸ್ಥೆಯವರ ಸಹಕಾರ ಮರೆಯಲಾಗದು. ಮುಂದೆ ನೀಟ್ ಪರೀಕ್ಷೆ ಬರೆದು ವೈದ್ಯಕೀಯ ಕ್ಷೇತ್ರಕ್ಕೆ ಹೋಗಬೇಕೆಂಬ ಆಸೆಯಿದೆ.- ಕಲ್ಪನಾ ಶ್ರೀಮಂತ ಚೆನ್ನಗೊಂಡ, ವಿದ್ಯಾರ್ಥಿನಿ.
ಬಾಕ್ಸ್: ವಿದ್ಯಾರ್ಥಿನಿಗೆ ಅಭಿನಂದನೆಗಳು. ಮುಂದೆ ಅವಳು ಯಾವ ಕ್ಷೇತ್ರದಲ್ಲಿ ಮುಂದುವರೆದರೂ ಸಂಸ್ಥೆ ವಿದ್ಯಾರ್ಥಿನಿಯ ಜೊತೆಗಿರುತ್ತದೆ. ಉಪನ್ಯಾಸಕ ವೃಂದಕ್ಕೂ ಅಭಿನಂದನೆಗಳು- ಸುಭಾಷ್ ಆರ್ ಗುತ್ತೇದಾರ, ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…