ಶಿವಶರಣ ಹಡಪದ ಅಣ್ಣಪ್ಪ ಅವರ ಜಯಂತಿ ಸರಳವಾಗಿ ಆಚರಣೆ

0
9

ಕಲಬುರಗಿ: ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಗಳ ಸಂಯುಕ್ತಾಶ್ರಯದಲ್ಲಿ ಶಿವಶರಣ ಹಡಪದ ಅಣ್ಣಪ್ಪ ಅವರ ಜಯಂತಿಯನ್ನು ಕೋವಿಡ್ ಹಿನ್ನೆಲೆ ಸರಳವಾಗಿ ಆಚರಿಸಲಾಯಿತು.

ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್, ದಕ್ಷಿಣ ಮತಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ ಹಾಗೂ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನ ಅವರು ಶಿವಶರಣ ಹಡಪದ ಅಣ್ಣಪ್ಪ ಅವರ ಭಾವಚಿತ್ರಕ್ಕೆ ಪು?ರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಮಾಜಿ ವಿಧಾನ ಪರಿ?ತ್ ಸದಸ್ಯ ಅಮರಾನಾಥ್ ಪಾಟೀಲ್, ಮಾಜಿ ಶಾಸಕ ದೊಡ್ಡಗೌಡರ ಪಾಟೀಲ ನರಿಬೋಳ, ಮುಖಂಡರಾದ ಸಿದ್ದಾಜೀ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾಡಳಿತ ವತಿಯಿಂದ ಚುನಾವಣಾ ತಹಸೀಲ್ದಾರ್ ಮಹಾತೇಶ ಮೂಡಬಿ, ಶಿರಸ್ತೆದಾರ್ ಉದಯಕುಮಾರ್ ಹಾಗೂ ಜಿಲ್ಲಾ ಹಡಪದ ಸಮಾಜದ ಗೌರವಧ್ಯಕ್ಷ ಬಸವರಾಜ ಸೂಗೂರು ಎನ್, ಜಿಲ್ಲಾ ಕಾರ್ಯದರ್ಶಿ ರಮೇಶ ನೀಲೂರ್, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾವಳಗಿ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಚಂದ್ರಶೇಖರ ತೊನಸಳ್ಳಿ, ನಗರ ಕಾರ್ಯದರ್ಶಿ ಅಪ್ಪಾರಾವ್ ಬಟಗೇರಾ ಸೇರಿದಂತೆ ಸಮಾಜದ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here