ಶಾಸಕ ಸುಭಾಷ್ ಗುತ್ತೇದಾರರಿಗೆ ಮಂತ್ರಿ ಮಾಡಲು ಮನವಿ

0
7

ಆಳಂದ: ಜಿಲ್ಲೆಯಲ್ಲಿ ಅತ್ಯಂತ ಹಿರಿಯ ಬಿಜೆಪಿ ಶಾಸಕರಾಗಿರುವ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರಿಗೆ ನೂತನ ಮಂತ್ರಿಮಂಡಲದಲ್ಲಿ ಸಚಿವರನ್ನಾಗಿ ಮಾಡುವುದರ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಬೇಕೆಂದು ಬಿಜೆಪಿ ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

ಸುಭಾಷ್ ಆರ್ ಗುತ್ತೇದಾರರು ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು ಕಲ್ಯಾಣ ಕರ್ನಾಟಕ ಪ್ರದೇಶದ ಅತ್ಯಂತ ಹಿರಿಯ ಬಿಜೆಪಿ ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಈ ಅವಧಿಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಅವಕಾಶ ನೀಡಿಲ್ಲ ಮೇಲಾಗಿ ಸ್ವತಂತ್ರ ಭಾರತದ ಇತಿಹಾಸದಲ್ಲಿ ಆಳಂದ ಮತಕ್ಷೇತ್ರದಿಂದ ಆಯ್ಕೆಯಾದ ಯಾವೊಬ್ಬ ಶಾಸಕರು ಸಚಿವರಾದ ಉದಾಹರಣೆ ಇಲ್ಲ ಅದಕ್ಕಾಗಿ ಬಹಳ ವರ್ಷಗಳಿಂದ ಆಗಿರುವ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಶಾಸಕರನ್ನು ಮುಂದಿನ ನೂತನ ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟು ಸಚಿವರನ್ನಾಗಿ ಮಾಡಿ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಬೇಕೆಂದು ವಿನಂತಿಸಿಕೊಂಡಿದ್ದಾರೆ.

Contact Your\'s Advertisement; 9902492681

ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರರು ಕಳೆದ ೨ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅತೀ ಹೆಚ್ಚಿನ ಮತಗಳು ಬರುವಂತೆ ಮಾಡಿದ್ದಾರೆ ಅಲ್ಲದೇ ಕ್ಷೇತ್ರದ ವ್ಯಾಪ್ತಿಯ ೭ ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ೬ರಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ತಾಲೂಕಾ ಪಂಚಾಯತಿ, ಪುರಸಭೆ, ಗ್ರಾಮ ಪಂಚಾಯತಿಗಳಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದಾರೆ ಅವರ ಪಕ್ಷ ಸಂಘಟನೆಯನ್ನು ಗುರುತಿಸಿ ಅವರಿಗೆ ಸಂಪುಟದಲ್ಲಿ ಅವಕಾಶ ಮಾಡಿಕೊಡಬೇಕೆಂದು ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎನ್ನುವಂತೆ ಆಳಂದ ಮತಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ತನ್ನ ಖಾತೆ ತೆಗೆಯುವಂತೆ ಮಾಡಿದ್ದಾರೆ ಮೇಲಿನ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರರನ್ನು ಸಚಿವರನ್ನಾಗಿ ಮಾಡಬೇಕೆಂದು ವರಿಷ್ಠರಲ್ಲಿ ವಿನಂತಿಸಿಕೊಂಡಿದ್ದಾರೆ.

ಬಾಕ್ಸ್: ಯಡಿಯೂರಪ್ಪನವರು ಮಾಸ್ ಲೀಡರ್ ಎನ್ನುವುದು ಸೂರ್ಯನಷ್ಟೇ ಸತ್ಯ, ಆದರೆ ಪಕ್ಷದ ಆಂತರಿಕ ವಿಚಾರಗಳಿಗೆ ಗೌರವ ಕೊಡಬೇಕಾಗಿರುವುದು ಎಲ್ಲರ ಕರ್ತವ್ಯ ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಲಿದೆ- ಆನಂದರಾವ ಪಾಟೀಲ ಕೋರಳ್ಳಿ. ಬಿಜೆಪಿ ಮಂಡಲ ಅಧ್ಯಕ್ಷರು, ಆಳಂದ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here