ಕಲಬುರಗಿ ಭಾಗದ ಶಾಸಕರಿಗೆ ಮುಂಬರುವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು: ಪಾಟೀಲ್

0
10

ಕಲಬುರಗಿ: ವೀರಶೈವ ಲಿಂಗಾಯತ ಸಮುದಾಯದ ಕಲಬುರಗಿ ಭಾಗದ ಯುವ ಶಾಸಕರಿಗೆ ಮುಂಬರುವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬಿಜಿಪಿ ಹೈ ಕಮಾಂಡ್ ಗೆ ಮತ್ತು ರಾಜ್ಯ ಬಿಜೆಪಿ ಮುಖಂಡರಿಗೆ ವೀರಶೈವ ಲಿಂಗಾಯತ ಯುವ ವೇದಿಕೆ ಕಲಬುರಗಿ ಸಮಿತಿಯ ಜಿಲ್ಲಾಧ್ಯಕ್ಷ ದಯಾನಂದ್ ಎಂ ಪಾಟೀಲ ನಿಲೂರ ಒತ್ತಾಯಿಸಿದ್ದಾರೆ.

ಇಗಾಗಲೇ ಯೆಡಿಯೂರಪ್ಪ ಅವರನ್ನ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ ಸಮುದಾಯಕ್ಕೆ ಅನ್ಯಾಯ ಆಗಿದೆ ಆದ್ದರಿಂದ ಕಲಬುರಗಿ ಭಾಗದ ನಮ್ಮ ಸಮುದಾಯದ ಯುವ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಬೇಕು ಎಂದೂ ರಾಜ್ಯ ಮತ್ತು ರಾಷ್ಟ್ರ ಮುಖಂಡರಿಗೆ ಎಚ್ಚರಿಕೆ ಕೊಡುತ್ತೇನೆ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತರು ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಪಾಟೀಲ ಪ್ರಕಟಣೆಯಲ್ಲಿ ಹೇಳಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here