ಕಲಬುರಗಿ: ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ, ಮುಖ್ಯಮಂತ್ರಿಗಳಾಗಿ ಗೃಹ ಸಚಿವರಾಗಿ ಲೋಕೋಪಯೋಗಿ ಸಚಿವರಾಗಿ ಹೀಗೆ ಹಲವಾರು ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಮಾಜಿ ಮುಖ್ಯಮಂತ್ರಿ, ಅಜಾತಶತ್ರು ದಿ. ಧರ್ಮಸಿಂಗ್ ಅgವರ 4 ನೇ ಪುಣ್ಯ ಸ್ಮರಣೋತ್ಸವ ಅವರ ತವರು ಜಿಲ್ಲೆ ಕಲಬುರಗಿ ಹಾಗೂ ಹುಟ್ಟೂರು ನೆಲೋಗಿಯಲ್ಲಿ ಸರಳವಾಗಿ ಆಚರಣೆ ಮಾಡಲಾಯ್ತು.
ಸದರಿ ಸ್ಮರಣೋತ್ಸವದಲ್ಲಿ ದಿ. ಧರಂಸಿಂಗ್ ಅವರ ಪತ್ನಿ ಪ್ರಭಾವತಿ ಧರಂಸಿಂಗ್, ಪುತ್ರರಾದ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್, ವಿದಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಹಾಗೂ ಕುಟುಂಬ ವರ್ಗದವರು ಆಪ್ತರು, ಆತ್ಮೀಯರು ಪಾಲ್ಗೊಂಡು ಗೌರವ ಪೂರ್ವಕವಾಗಿ ನೆನೆಯುತ್ತಾ ಅವರಿಗೆ ನನ್ನ ನಮನಗಳನ್ನು ಸಲ್ಲಿಸಿದರು.
ಮಾಜಿ ಎಂಎಲ್ಸಿ ಅಲ್ಲಂಪ್ರಭು ಪಾಟೀಲ್, ನಾರಾಯಣರಾವ ಕಾಳೆ, ಕೆಪಿಸಿಸಿ ಸದಸ್ಯ ಹಣಮಂತರಾವ್ ಭೂಸನೂರ್ ಸೇರಿದಂತೆ ಕಾಂಗ್ರೆಸ್ ಪ್ರಮುಖರು, ಕಾರ್ಯಕರ್ತರು ಅಭಿಮಾನಿಗಳು ಪಾಲ್ಗೊಂಡಿದ್ದರು.
ಧರಂಸಿಂಗ್ ಅವರ ಆಪ್ತರಲ್ಲೊಬ್ಬರಾದ ಸಿಬಿ ಪಾಟೀಲ್ ತಮ್ಮ ಊರು ಓಕಳಿಯಲ್ಲಿ ಮಂಗಳವಾರ ಧರಂಸಿಂಗ್ ಸ್ಮರಣೋತ್ಸವ ನಡೆಸಿದರು. ಕರ್ನಾಟಕ ಕಂಡ ಅಪರೂಪದ ಹಾಗೂ ಜನಪರ ಆಡಳಿತ ನೀಡಿದ ಸಿಎಂ ಎಂದರೆ ಧರಂಸಿಂಗ್ ಎಂದು ಅವರು ಇದೇ ವೇಳೆ ನಡೆದ ಸಭೆಯಲ್ಲಿ ಮಾತನಾಡುತ್ತ ಹೇಳಿದರು.
ಸಮಾರಂಭದ ನಂತರ ಪಾಲ್ಗೊಂಡ ಮಕ್ಕಳು, ಮಹಿಳೆಯರು, ಊರವರೆಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಧರಂಸಿಂಗ್ ಜನಪರ ಧೋರಣೆಯೇ ಅವರನ್ನು ಇದುವರೆಗೂ ಜನಮನದಲ್ಲಿರುವಂತೆ ಮಾಡಿದೆ ಎಂದು ನೆಲೋಗಿ ಊರವರು ತಮ್ಮೂರಿನ ಜನನಾಯಕನನ್ನು ಕೊಂಡಾಡಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…