ಬೊಮ್ಮಾಯಿ ಮುಖ್ಯಮಂತ್ರಿ: ಹರ್ಷ

0
54

ಕಲಬುರಗಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿರುವುದಕ್ಕೆ ಮಹಾಗಾಂವ ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಮರತೂರಕರ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು , ನಮ್ಮ ಹೆಮ್ಮೆಯ ನಾಯಕರಾದ ಯಡಿಯೂರಪ್ಪ ನವರ ಪದತ್ಯಾಗ ನೋವಿನ ಸಂಗತಿಯಾಗಿದ್ದರೂ , ಬಿಜೆಪಿ ವರಿಷ್ಠರು ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿರುವುದು ಸ್ವಾಗತಾರ್ಹ ಎಂದರು.

Contact Your\'s Advertisement; 9902492681

ಕೇಂದ್ರ ಸರ್ಕಾರ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿರುವುದು ಸಂತಸ ತಂದಿದೆ ಎಂದರು.ಎಸ್ ಆರ್ ಬೊಮ್ಮಾಯಿ ಅವರ ಮಗ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ನೂತನ 30ನೇ ಸಿಎಂ ಆಗಿ ಸರ್ವ ಸಮ್ಮತವಾಗಿ ಆಯ್ಕೆ ಮಾಡಿರುವುದು ನಿಜಕ್ಕೂ ಸಂತಸ ತಂದಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಹಾಗೂ ರಾಷ್ಟ್ರೀಯ ಅಧ್ಯಕ್ಷ ನರೇಂದ್ರ ಅವರಿಗೂ ಹಾಗೂ ಸಹಕರಿಸಿದ ಎಲ್ಲರಿಗೂ ಅನಂತಾನಂತ ಧನ್ಯವಾದಗಳು ಎಂದು ತಿಳಿಸಿದರು.

ರಾಜಕೀಯದಲ್ಲಿ ಅನುಭವಿ ನಾಯಕರು,ಕಳಕಳಿಯ ನಾಯಕರು ಎಂದೇ ಖ್ಯಾತಿ ಗಳಿಸಿರುವ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಒಳ್ಳೆಯ ಕೆಲಸವನ್ನು ಮಾಡಲಿದ್ದಾರೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here