ದತ್ತಾತ್ರೇಯ ಪಾಟೀಲ್ ಅವರಿಗೆ ಮಂತ್ರಿ ಸ್ಥಾನ ನೀಡಿ: ಜಗದೇವ ದಿಗ್ಗಾಂವಕರ್ ಮನವಿ

0
46

ಚಿತ್ತಾಪುರ: ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರ್ಗಿ ನೆಲದಲ್ಲಿ ಕಮಲ ಅರಳಿಸಲು ಕಾರಣೀಭೂತರಾದ ದಿ. ಚಂದ್ರಶೇಖರ ಪಾಟೀಲ್ ರೇವೂರ್ ಅವರ ಸುಪುತ್ರ ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ಕಾರ್ಯದರ್ಶಿ ಜಗದೇವ ದಿಗ್ಗಾಂವಕರ್ ಮನವಿ ಮಾಡಿದ್ದಾರೆ.

ಕಲಬುರ್ಗಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಏಳಿಗೆಗಾಗಿ ನಗರ ಪಟ್ಟಣ ಮತ್ತು ಜೆಲ್ಲೆಯ ಹಳ್ಳಿ ಹಳ್ಳಿಗಳನ್ನು ಹಗಲಿರುಳು ಸುತ್ತಿ ಪಕ್ಷ ಸಂಘಟನೆ ಮಾಡಿ ಕಲಬುರ್ಗಿಯಲ್ಲಿ ಕಮಲ ಅರಳುವಂತೆ ಮಾಡಿದ ರೇವೂರ ಕುಟುಂಬಕ್ಕೆ ಮಂತ್ರಿ ಪದವಿ ನೀಡುವುದು ಅಗತ್ಯವಾಗಿದೆ. ಶಾಸಕ ದತ್ತಾತ್ರೇಯ ಪಾಟೀಲ್(ಅಪ್ಪು ಗೌಡರು)ಯುವ ನಾಯಕರಾಗಿದ್ದು ವೀರಶೈವ ಲಿಂಗಾಯತ ಸಮುದಾಯ ಸೇರಿದಂತೆ ಸರ್ವ ಸಮುದಾಯದವರನ್ನು ಸಮಾನವಾಗಿ ಕಾಣುವ ಶಾಸಕರಾಗಿದ್ದಾರೆ.

Contact Your\'s Advertisement; 9902492681

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕಂಕಣತೊಟ್ಟು ಪ್ರಾಮಾಣಿಕವಾಗಿ ದುಡಿಯುವತ್ತಿರುವ ಸೇವಾ ಮನೋಭಾವದ ಶಾಸಕರಿಗೆ ರಾಜ್ಯದಲ್ಲಿ ಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುವಂತೆ ದಿಗ್ಗಾಂವಕರ್ ಅವರು ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೆ ಹಾಗೂ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಕಲ್ಯಾಣ ನಾಡಿನ ಬಗ್ಗೆ ವಿಶೇಷವಾದ ಕಾಳಜಿ ಇದ್ದು,ಯುವ ಸಮುದಾಯದ ಭರವಸೆಯ ಶಾಸಕ ಲಿಂಗಾಯತ ಸಮುದಾಯ ಪ್ರಭಾವಿ ಶಾಸಕರಾದ ಅಪ್ಪು ಗೌಡರಿಗೆ ಮಂತ್ರಿ ಸ್ಥಾನ ನೀಡಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಬೇಕು ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here