ಆ.೧ ರಂದು ಅಣ್ಣಾಭಾವು ಸಾಠೆ ಅವರು ೧೦೧ನೇ ಜಯಂತಿ ಆಚರಣೆ

ಕಲಬುರಗಿ: ಅಗಸ್ಟ್ ೧ ರಂದು ಸಾಹಿತ್ಯ ಸಾಮ್ರಾಟ್ ಲೋಕಶಾಹಿರ ಅಣ್ಣಾಭಾವು ಸಾಠೆ ಅವರ ೧೦೧ನೇ ಜಯಂತಿಯನ್ನು ಸರಳವಾಗಿ ಕೋವಿಡ್-೧೯ ರ ನಿಯಮಗಳನ್ನು ಪಾಲಿಸುವುದರೊಂದಿಗೆ ಅಂದು ಬೆಳಿಗ್ಗೆ ೧೦-೩೦ಕ್ಕೆ ನಗರದ ಕನ್ನಡ ಭವನದಲ್ಲಿ ಅಣ್ಣಾಬಾವು ಸಾಠೆ ಮಾದಿಗ ಮಹಾಸಭಾದ ವತಿಯಿಂದ ಮಾದಿಗ ಹಿರಿಯ ಮುಖಂಡರಾದ ದಶರಥ ಕಲಗುರ್ತಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾದಿಗ ಸಮಾಹ ಸಮನ್ವಯ ಸಮಿತಿಯ ಅಧ್ಯಕ್ಷ ಪರಮೇಶ್ವರ ಖಾನಾಪೂರ ಅವರು ವಹಿಸಲಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಭೀಮಣ್ಣ ಬಿಲ್ಲವ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಫಾಯಿ ಕರ್ಮಚಾರಿ ರಾಜ್ಯ ಸದಸ್ಯರಾದ ಗೀತಾ ವಾಡೇಕರ್ ಅವರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾದಿಗ ಸಮಾಜದ ಹಿರಿಯ ಮುಖಂಡರಾದ ಶಾಮ ನಾಟೀಕರ್, ಡಿಎಂಎಸ್‌ಎಸ್‌ನ ರಾಜ್ಯಾಧ್ಯಕ್ಷ ಲಿಂಗರಾಜ ತಾರಪೈಲ್, ರಾಜು ವಾಡೇಕರ್, ಗೋಪಿಕೃಷ್ಣ ಗುಡೇನವರ್, ಮಾದಿಗ ದಂಡೋರ ರಾಜ್ಯ ಯುವ ಘಟಕದ ಅಧ್ಯಕ್ಷ ಗುರು ಭಂಡಾರಿ, ಮಹೇಶ ವಾಡೇಕರ್, ಬಾಬು ಸುಂಠಾಣ, ರಾಜು ಕಟ್ಟಿಮನಿ, ರಮೇಶ ವಾಡೇಕರ್, ಸಮಾಜದ ಮುಖಂಡರಾದ ದಶರಥ ದುಮ್ಮನಸೂರ, ಪ್ರದೀಪ ಭಾವೆ ಮತ್ತು ಸಮಾಜದ ಹಿರಿಯ ಮುಖಂಡರು, ಯುವನಾಯಕರು, ಸಮಾಜದ ಹಿತಚಿಂತಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಿತಿಯ ರಾಜ್ಯಾಧ್ಯಕ್ಷ ನಾಗರಾಜು ಗುಂಡಗುರ್ತಿ ಅವರು ಪತ್ರಿಕಾ ಪ್ರಕಟಣೆಯನ್ನು ಮನವಿ ಮಾಡಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420