ಸುರಪುರ: ಮುಂಬರುವ ಸಚಿವ ಸಂಪುಟದಲ್ಲಿ ನಮ್ಮ ಸುರಪುರ ಕ್ಷೇತ್ರದ ಶಾಸಕರು ಹಾಗು ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ) ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡುವಂತೆ ಎಪಿಎಂಸಿ ಅಧ್ಯಕ್ಷ ದುರ್ಗಪ್ಪ ಗೋಗಿಕೆರಾ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿರುವ ಅವರು,ನಮ್ಮ ಶಾಸಕರಾದ ರಾಜುಗೌಡ ಅವರು ಈ ಹಿಂದೆ ಸಣ್ಣ ಕೈಗಾರಿಕೆ ಸಚಿವರಾಗಿ ಅನೇಕ ಅಭೀವೃಧ್ಧಿ ಪರವಾದ ಯೋಜನೆಗಳ ಮೂಲಕ ರಾಜ್ಯದ ಜನರ ಮನದಲ್ಲಿ ಉಳಿದಿದ್ದಾರೆ.ಅಲ್ಲದೆ ಸದ್ಯ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ.
ಜೊತೆಗೆ ಭಾರತಿಯ ಜನತಾ ಪಕ್ಷದ ಬೆಳೆವಣಿಗೆಯಲ್ಲಿ ಎಸ್ಟಿ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಮುಖ್ಯವಾಗಿ ಇಡೀ ಸುರಪುರ ಮತಕ್ಷೇತ್ರದ ಜನರ ಮನದಲ್ಲಿ ಉಳಿದುಕೊಳ್ಳುವಂತೆ ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ಎರಗಿರುವ ಕೊರೊನಾ ಮಹಾಮಾರಿ ಸಂದರ್ಭದಲ್ಲಿ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಜನ ಜಾಗೃತಿ ಮೂಡಿಸುವ ಜೊತೆಗೆ ಜನರಿಗೆ ಅನೇಕ ರೀತಿಯಲ್ಲಿ ನೆರವಾಗುವ ಮೂಲಕ ರಾಜ್ಯದಲ್ಲಿಯೇ ತಮ್ಮದೆ ಆದ ಹೆಸರುಗಳಿಸಿದ್ದಾರೆ.
ಇಂತಹ ಮಹಾನ್ ನಾಯಕರಾದ ನಮ್ಮ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕೆಂದು ಸುರಪುರ ತಾಲೂಕಿನ ಜನತೆ ಪರವಾಗಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…