ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳು ಸಂಶೋಧನೆಯತ್ತ ಹೆಚ್ಚು ಗಮನ ಹರಿಸಬೇಕು: ಡಾ.ಎನ್.ವಿ.ಪ್ರಸಾದ

ಕಲಬುರಗಿ: ಹೊಸ ಕೋರ್ಸಗಳನ್ನು ಆರಂಭಿಸುವ ಮೂಲಕ ಶರಣಬಸವ ವಿಶ್ವವಿದ್ಯಾಲಯವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಉತ್ತುಂಗದ ಸ್ಥಾನದಲ್ಲಿದ್ದು ಜೊತೆಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಂಶೋಧನೆ ಮಾಡಲು ಪ್ರೋತ್ಸಾಹಿಸಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ.ಪ್ರಸಾದ ಹೇಳಿದರು.

ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ಜರುಗಿದ ಶರಣಬಸವ ವಿಶ್ವವಿದ್ಯಾಲಯದ ೪ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಓದು ಕೇವಲ ಉದ್ಯೋಗಕ್ಕಾಗಿ ಅಲ್ಲದೇ ದೇಶದ ಅಭಿವೃಧ್ದಿಗೆ ಸಂಶೋಧನಯಲ್ಲಿ ತೊಡಗಿಕೊಳ್ಳಬೇಕು. ಮುಖ್ಯವಾಗಿ ಪಿಎಚ್.ಡಿ ಹಾಗೂ ಪಿಜಿ ವಿದ್ಯಾರ್ಥಿಗಳು ಇತ್ತ ಗಮನ ಹರಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಶ್ವವಿದ್ಯಾಲಯವು ವಿದೇಶಿ ಭಾಷೆಗಳನ್ನು ಪಠ್ಯದಲ್ಲಿ ಅನುಷ್ಠಾನಗೊಳಿಸುವ ಮೂಲಕ ವಿಧ್ಯಾರ್ಥಿಗಳಿಗೆ ಹುರಿದುಂಬಿಸಬೇಕೆಂದು ಕರೆ ನೀಡಿದರು.

ಗಣಿತ ಹಾಗೂ ಸಂಖ್ಯಾಶಾಸ್ತ್ರದಲ್ಲಿ ಈ ಭಾಗದ ವಿಧ್ಯಾರ್ಥಿಗಳು ತುಂಬಾ ಹಿಂದೆ ಇದ್ದು ಶಿಕ್ಷಕರು ವಿಧ್ಯಾರ್ಥಿಗಳಿಗೆ ಉತ್ತೇಜಿಸುವತ್ತ ಗಮನ ಹರಿಸಬೇಕು. ದಿನದಿಂದ ದಿನಕ್ಕೆ ತಂತ್ರಜ್ಞಾನವು ಅಭಿವೃದ್ದಿಗೊಳ್ಳುತ್ತಿದ್ದು ಜೊತೆಜೊತೆಗೆ ಆಧುನಿಕವಾಗಿ ಚುರುಕುಗೊಳ್ಳಬೇಕೆಂದು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿಶ್ವವಿದ್ಯಾಲಯವು ಮಾನವ ಮೌಲ್ಯಗಳಾಧಾರಿತ ಇನ್ನೂ ಹೆಚ್ಚು ಹೊಸ ಕೋರ್ಸಗಳನ್ನು ಆರಂಭಿಸಬೇಕೆಂದು ಕರೆ ನೀಡಿದರು. ಕೇಂದ್ರ ಸರಕಾರದ ಹೊಸ ಶಿಕ್ಷಣ ನೀತಿ (ಓಇP) ವಿಧ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಪಾಲ್ಗೂಂಡ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಮಾತನಾಡುತ್ತ, ಡಾ.ಶರಣಬಸವಪ್ಪ ಅಪ್ಪಾ ಅವರ ಕನಸಿನ ಕೂಸಾದ ಶರಣಬಸವ ವಿಶ್ವವಿದ್ಯಾಲಯ ಪ್ರಾರಂಭಿಸಿದ ವರ್ಷದಂದು ಚಿರಂಜೀವಿ ದೊಡ್ಡಪ್ಪಾ ಅಪ್ಪಾ ಅವರು ಜನಿಸಿದರು ಹಾಗೇ ಲಿಂ.ದೊಡ್ಡಪ್ಪಾ ಅಪ್ಪಾ ಅವರು ಶಾಲೆ ಪ್ರಾರಂಭಿಸಿದ ವರ್ಷದಂದು ಡಾ.ಶರಣಬಸವಪ್ಪ ಅಪ್ಪಾಜಿ ಅವರು ಜನಿಸಿದರು. ಡಾ.ಅಪ್ಪಾ ಅವರ ಆಶಯದಂತೆ ವಿಶ್ವವಿದ್ಯಾಲಯವು ಇನ್ನೂ ಹೆಚ್ಚಿನ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ವಿಧ್ಯಾರ್ಥಿಗಳಿಗೆ ಪ್ರೋತ್ಸಾಹಿಸುತ್ತೆವೆಂದು ಭರವಸೆ ನೀಡಿದರು.

ಪ್ರಾಸ್ತವಿಕವಾಗಿ ಮಾತನಾಡಿದ ವಿವಿ ಕುಲಸಚಿವ ಡಾ.ಅನೀಲಕುಮಾರ ಬಿಡವೆ ವಿಶ್ವವಿದ್ಯಾಲಯ ೪ ವರ್ಷದಿಂದ ನಡೆದುಬಂದ ದಾರಿಯನ್ನು ಒಂದೊಂದಾಗಿ ವಿವರಿಸಿದರು. ಡಾ. ಶರಣಬಸವಪ್ಪ ಅಪ್ಪಾಜಿ ಹಾಗೂ ಮಾತೋಶ್ರೀ ಡಾ.ದಾಕ್ಷಯಿಣಿ ಅವ್ವಾಜಿ ಅವರ ಆಶೀರ್ವಾದದಿಂದ ಹಾಗೂ ಎಲ್ಲರ ಪರಿಶ್ರಮದಿಂದ ಶರಣಬಸವ ವಿಶ್ವವಿದ್ಯಾಲಯವು ನಮ್ಮ ಭಾಗದಲಿಯೇ ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿ ಕುಲಪತಿ ಡಾ.ನಿರಂಜನ.ವಿ.ನಿಷ್ಠಿ ಕ್ಯಾಂಪಸ್ ಆಯ್ಕೆಯಲ್ಲಿ ವಿವಿಧ ವಿಭಾಗಗಳ ವಿಧ್ಯಾರ್ಥಿಗಳು ದೇಶದ ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದಕ್ಕಾಗಿ ಅಭಿನಂದಿಸಿದರು. ಮಹಾಮಾರಿ ಕರೋನ ಬಂದ ದಿನಗಳಲ್ಲಿ ಅದನ್ನು ಹೊಗಲಾಡಿಸಲು ಸಂಶೋಧನೆಯಿಂದಲೆ ಸಾಧ್ಯವಾಗಿದೆ. ವಿಧ್ಯಾರ್ಥಿಗಳು ತಮ್ಮ ಜೀವನ ರೂಪಿಸಿಕೊಳ್ಳಬೇಕೆಂದರೆ ಕೇವಲ ಓದಿನಲ್ಲಿ ಮಗ್ನರಾಗದೆ ಇತರ ಚಟುವಟಿಗಳಲ್ಲಿಯೂ ಪರಿಣಿತಿ ಹೊಂದಬೇಕು. ಜೀವನದಲ್ಲಿ ನಾವುಗಳು ಕೇವಲ ಆರ್ಥಿಕವಾಗಿ ಸಬಲರಾಗದೆ ಹಣವನ್ನು ಹೇಗೆ ಮತ್ತು ಎಲ್ಲಿ ಹೂಡಿಕೆ ಮಾಡಬೇಕು ಎನ್ನುವುದನ್ನು ಮನಗಾಣಬೇಕು. ನಮ್ಮ ಓದು ಮತ್ತು ಸಂಶೋಧನೆ ದೇಶಕ್ಕೆ ಹಾಗೂ ಮುಂದಿನ ಪೀಳಿಗೆಗೆ ಉಪಯೋಗವಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕ್ಯಾಂಪಸ್ ಆಯ್ಕೆಯಲ್ಲಿ ವಿವಿಧ ವಿಭಾಗಗಳ ವಿಧ್ಯಾರ್ಥಿಗಳು ದೇಶದ ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದಕ್ಕಾಗಿ ೨೦೦ಕ್ಕೂ ಹೆಚ್ಚು ವಿಧ್ಯಾರ್ಥಿಗಳಿಗೆ ಹಾಗೂ ಕಾರಣಿಭೂತರಾದ ವಿವಿ ಪ್ಲೇಸ್‌ಮೆಂಟ್ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಸಮಕುಲಪತಿ ಪ್ರೊ.ವಿ.ಡಿ.ಮೈತ್ರಿ ಮತ್ತು ಎನ್.ಎಸ್.ದೇವರಕಲ್, ಕುಲಸಚಿವ (ಮೌಲ್ಯಮಾಪನ) ಡಾ.ಲಿಂಗರಾಜ ಶಾಸ್ತ್ರೀ, ಡೀನ್‌ರಾದ ಡಾ.ಲಕ್ಷ್ಮೀ ಪಾಟೀಲ ಮಾಕಾ ಹಾಗೂ ಡಾ.ಬಸವರಾಜ ಮಠಪತಿ ಇದ್ದರು.

ಸಂಗೀತ ವಿಭಾಗದವರು ಪ್ರಾರ್ಥನ ಗೀತೆ ಹಾಡಿದರು. ಎಂ.ಟಿ.ಎ ವಿಭಾಗದ ಡೀನ್ ವಾಣಿಶ್ರೀ ಸ್ವಾಗತಿಸಿದರು. ಗೋದುತಾಯಿ ಇಂಜಿನಿಯರಿಂಗ್ ಕಾಲೇಜಿನ ಅಭಿಲಾಷಾ ಮತ್ತು ಚೇತನಾ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಪ್ರೊ.ನಾಗಬಸವಣ್ಣ ಗುರಾಗೋಳ ವಂದಿಸಿದರು.

ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ಜರುಗಿದ ಶರಣಬಸವ ವಿಶ್ವವಿದ್ಯಾಲಯದ ೪ನೇ ಸಂಸ್ಥಾಪನಾ ದಿನಾಚರಣೆಯಲ್ಲಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರ ಹುಟ್ಟು ಹಬ್ಬದ ನಿಮಿತ್ತ ಕೇಕ ಕತ್ತರಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ಸಿಬ್ಬಂದಿ ವರ್ಗದವರು ಶ್ರೀ ಬಸವರಾಜ ದೇಶಮುಖ ಅವರಿಗೆ ಸನ್ಮಾನಿಸಿದರು ಹಾಗೂ ಬಸವರಾಜ ದೇಶಮುಖ ಅವರು ವಿವಿಯ ಆವರಣದಲ್ಲಿ ಸಸಿ ನೆಡುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

23 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

26 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

29 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago