ಕಲಬುರಗಿ: ಹನುಮಾನ್ ದೇವಸ್ಥಾನದ ಹುಂಡಿ ಒಡೆದು ಕಳ್ಳನೊಬ್ಬ ಲಕ್ಷಾಂತರ ರೂಪಾಯಿ ಹಣ ದೋಚಿ ಪರಾರಿಯಾದ ಘಟನೆ ನಗರದ ವಿಠಲ ನಗರದಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ನಡೆದಿದೆ.
ಕಳ್ಳನ ಕೈಚಳಕ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ನಸುಕಿನ ವೇಳೆ ಕಳ್ಳ ದೇವಸ್ಥಾನದ ಹುಂಡಿ ಒಡೆದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾನೆ.
ಮುಖ್ಯ ದ್ವಾರದ ಬೀಗ ಮುರಿದು ಒಳಗೆ ನುಸುಳುವ ಚೋರ, ನಂತರ ರಾಡ್ನಿಂದ ಹರಸಾಹಸ ಪಟ್ಟು ಹುಂಡಿ ಒಡೆದು ಹಣ ದೋಚಿದ್ದಾನೆ. ಹುಂಡಿ ಒಡೆಯುವ ವೇಳೆ ಸಿಸಿ ಕ್ಯಾಮರಾ ನೋಡಿದ ಕಳ್ಳ ತನ್ನ ಮುಖ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗುತ್ತಿದೆ ಎಂದು ತಿಳಿದು ದೇವಸ್ಥಾನದ ಲೈಟ್ ಬಂದ್ ಮಾಡಿ ಕಳ್ಳತನ ಮಾಡಿದ್ದಾನೆ.
ಹುಂಡಿ ಒಡೆಯಲು 20 ನಿಮಿಷ ಹರಸಾಹಸ ಪಟ್ಟು ಕಡೆಗೂ ಹುಂಡಿ ಒಡೆದು ಭಕ್ತರ ಕಾಣಿಕೆಯ ಹಣ ಕದ್ದೊಯ್ದಿದ್ದಾನೆ. ಈ ಸಂಬಂಧ ಕಲಬುರಗಿಯ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…