ಕಲಬುರಗಿ: ರಾಜ್ಯದಲ್ಲಿನ ಹೊಸ ತಾಲ್ಲೂಕುಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಗುರುವಾರ ಜುಲೈ 4 ರಂದು ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ಇಲ್ಲಿ ಹೇಳಿದರು.
ಬುಧವಾರ ಅಫಜಲಪುರ ತಾಲ್ಲೂಕಿನ ಗೊಬ್ಬೂರ್(ಬಿ) ಗ್ರಾಮದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹೊಸ ತಾಲ್ಲೂಕುಗಳಿಗೆ ಕಂದಾಯ ಕಚೇರಿ ಹೊರತುಪಡಿಸಿ ಇನ್ನುಳಿದ ಸೌಲಭ್ಯಗಳಿಲ್ಲ. ಆ ಸೌಲಭ್ಯಗಳನ್ನು ಕಲ್ಪಿಸಲು ಸಭೆ ಕರೆದಿದ್ದಾಗಿ ತಿಳಿಸಿದರು.
ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸುವರು. ಹೊಸ ತಾಲ್ಲೂಕುಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದಾಗಿ ಅವರು ಹೇಳಿದರು.
ರಾಜ್ಯ ಸರ್ಕಾರ ಉಳಿಸಿಕೊಳ್ಳಲು ದೇವಲ್ ಗಾಣಗಾಪೂರ್ ದತ್ತಾತ್ರೇಯ ದೇವರಿಗೆ ಪ್ರಾರ್ಥನೆ ಮಾಡಿದೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರ ಸುಭದ್ರವಾಗಿದೆ.ಆಡಳಿತ ಪೂರ್ಣಗೊಳಿಸಲಿದೆ. ರಾಜ್ಯದಲ್ಲಿ ಮಳೆ. ಬೆಳೆ ಚೆನ್ನಾಗಿ ಆಗಲೆಂದು ಪ್ರಾರ್ಥಿಸಿರುವೆ ಎಂದರು.
ಕಾಂಗ್ರೆಸ್ಸಿನ ಆನಂದಸಿಂಗ್ ಹಾಗೂ ರಮೇಶ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದು, ಇನ್ನೂ ಐವರು ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡುವ ವಿಷಯಗಳ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಅಭಿವೃದ್ಧಿ ಕಾರ್ಯಗಳತ್ತ ಮಾತ್ರ ಗಮನಹರಿಸಿರುವೆ. ಪಕ್ಷದ ಕುರಿತು ಪಕ್ಚದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುವರು ಎಂದು ಅವರು ಹೇಳಿದರು.
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ…
ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ " ಕಾಯಕ ರತ್ನ…
ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…
ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…
ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…
ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…