ಶಾಸಕ ರೇವೂರ ಅವರಿಗೆ ಸಚಿವ ಸ್ಥಾನ ನೀಡಲಿ

0
72

ಕಲಬರುಗಿ: ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ.ಪಾಟೀಲ ರೇವೂರ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾ ಕಲಬರುಗಿ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯ ಮಹೇಶ ರೆಡ್ಡಿ ಹಾಗೂ ಜಿಲ್ಲಾ ಯುವ ಘಟಕ ಪ್ರಧಾನ ಕಾರ್ಯದರ್ಶಿ ಶಾಂತರೆಡ್ಡಿ ಪೇಠಶಿರೂರ ಬಿಜೆಪಿ ವರಷ್ಠರಲ್ಲಿ ಮನವಿ ಮಾಡಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯದ ಸೇರಿದಂತೆ ಸರ್ವ ಸಮುದಾಯದವರನ್ನು ಸಮಾನವಾಗಿ ಕಾಣುತ್ತಿದ್ದು, ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಕಂಕಣತೊಟ್ಟು ಪ್ರಾಮಾಣಿಕವಾಗಿ ದುಡಿಯುತ್ತಿರುವ ಸೇವಾ ಮನೋಭಾವದ ಶಾಸಕರಿಗೆ ರಾಜ್ಯದಲ್ಲಿ ಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು.

Contact Your\'s Advertisement; 9902492681

ಯುವ ಸಮುದಾಯದ ಭರವಸೆಯ ಪ್ರಭಾವಿ ಶಾಸಕ ಅಪ್ಪುಗೌಡರಿಗೆ ಮಂತ್ರಿ ಸ್ಥಾನ ನೀಡಿ ಪ್ರಾದೇಶಿಕ ಅಸಮಾನತೆಯಿಂದ ಕಡೆಗಣಿಸಲ್ಪಟ್ಟಿರುವ ಕಲ್ಯಾಣ ನಾಡಿನ ಪ್ರಗತಿಗೆ ಹೊಸ ಭಾಷ್ಯ ಬರೆಯಲಿ ಎಂದು ಮನವಿಮಾಡಿಕೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here