ಬಿಸಿ ಬಿಸಿ ಸುದ್ದಿ

ತಾಲೂಕಿನ ಗ್ರಾಮೀಣ ಭಾಗದ ಎಲ್ಲಾ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಿ

ಸುರಪುರ:ಕೋವಿಡ್‌ನಿಂದಾಗಿ ತಾಲೂಕಿನ ಗ್ರಾಮೀಣ ಭಾಗದಲ್ಲಿನ ಎಲ್ಲಾ ಸಮುದಾಯಗಳ ಬಡ ಕುಟುಂಬದಲ್ಲಿನ ವಿದ್ಯಾರ್ಥಿಗಳು ಆರ್ಥಿಕ ತೊಂದರೆಗೊಳಗಾಗಿದ್ದು,ಗ್ರಾಮ ಪಂಚಾಯತಿಯಿಂದ ಸಹಾಧನ ನೀಡಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ತಾಲೂಕು ಪಂಚಾಯತಿ ಇಒ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಪರಿಷತ್‌ನ ಕಲಬುರಗಿ ವಿಭಾಗ ಸಹ ಪ್ರಮುಖರಾದ ಡಾ: ಉಪೇಂದ್ರ ನಾಯಕ ಸುಬೇದಾರ ಮಾತನಾಡಿ,ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿಯಿಂದಾಗಿ ಎಲ್ಲರ ಬದುಕನ್ನು ತಲ್ಲಣಗೊಳಿಸಿದೆ.ಅದರಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಬಡ ಹಾಗು ಮದ್ಯಮ ವರ್ಗಗಳ ಕಟುಂಬ ನಿರ್ವಹಣೆ ತುಂಬಾ ತೊಂದರೆ ಅನುಭವಿಸುತ್ತಿದೆ.

ಇಂತಹ ಸಂದರ್ಭದಲ್ಲಿ ಈಗ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳು ಕಾಲೇಜು ಪ್ರವೇಶ ಶುಲ್ಕ ತುಂಬಲು ತೀವ್ರ ಸಮಸ್ಯೆ ಹೆದರಿಸುವಂತಾಗಿದೆ.ಆದ್ದರಿಂದ ಮಾನ್ಯರಾದ ತಾವುಗಳು ಗ್ರಾಮೀಣ ಪ್ರದೇಶದಲ್ಲಿನ ಎಲ್ಲಾ ಸಮುದಾಯದ ಬಡ ಕುಟುಂಬದ ವಿದ್ಯಾರ್ಥಿಗಳು ಕಾಲೇಜು ಪ್ರವೇಶಕ್ಕೆ ಶುಲ್ಕಕ್ಕಾಗಿ ಸಹಾಯಧನವನ್ನು ನೀಡುವುದು ಅಗತ್ಯವಾಗಿದೆ.ಆದ್ದರಿಂದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನವನ್ನು ನೀಡುವಂತೆ ಪಿಡಿಒಗಳಿಗೆ ಸೂಚನೆಯನ್ನು ನೀಡಿದಲ್ಲಿ ತುಂಬಾ ಅನುಕೂಲವಾಗಲಿದೆ.

ಕೇವಲ ಎಸ್.ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡುತ್ತಿರುವುದಾಗಿ ಮಾಹಿತಿ ಇದೆ,ಆದರೆ ಈಗಿನ ಪರಸ್ಥಿತಿಯಲ್ಲಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ತೀವ್ರ ತೊಂದರೆಯಲ್ಲಿರುವುದರಿಂದ ಯಾವುದೇ ಸಮುದಾದ ತಾರತಮ್ಯವಿಲ್ಲದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಧನ ಸಹಾಯ ದೊರೆಯಲು ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ವಿನಂತಿಸುತ್ತದೆ.ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮೂಡಲದಿನ್ನಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪರಿಷತ್‌ನ ನಗರ ಕಾರ್ಯದರ್ಶಿ ಹನುಮಂತ ಸಿಂಘೆ,ಕಾರ್ಯದರ್ಶಿ ಹುಲಗಪ್ಪ, ಕ್ಯಾತಪ್ಪ ಮೇದಾ ಸೇರಿದಂತೆ ಇತರರಿದ್ದರು.

emedialine

Recent Posts

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

3 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

4 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

5 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

7 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

7 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420