ರೈತರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುವೆ: ಅರುಣಕುಮಾರ ಪಾಟೀಲ

ಕಲಬುರಗಿ: ದೇಶದ ಬೆನ್ನೆಲುಬಾಗಿ ಇಡೀ ಮಾನವ ಕುಲಕ್ಕೆ ಅನ್ನ ನೀಡುವ ರೈತರಿಗೆ ಅನ್ಯಾಯವಾಗದಂತೆ ಕೆಲಸ ಮಾಡುವೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಸದಸ್ಯರಾದ ಅರುಣಕುಮಾರ ಎಂ. ಪಾಟೀಲ ಹೇಳಿದರು.

ಅಫಜಲಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಬರುವ ಮಿಣಜಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ   ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ಅರ್ಹ ಫಲಾನುಭವಿಗಳಿಗೆ ಸುಮಾರು ರೂ.25 ಸಾವೀರ ಬಡ್ಡಿ ರಹಿತ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ರೀತಿಯಲ್ಲಿ  ಬೆಲೆ ಸಿಗದೆ ತುಂಬಾ ಸಂಕಷ್ಟಕ್ಕೆ ಸಿಲುಕಿ  ರೈತರು ತಾವು ಮಾಡಿದ ಸಾಲವನ್ನು ಮರುಪಾವತಿ ಮಾಡಕ್ಕಾಗದೆ ತಮ್ಮ ಜೀವನವನ್ನು ಕಳೆದುಕೊಳ್ಳಲು ಮುಂದಾಗುತ್ತಿದ್ದಾರೆ.

ರೈತರು ತಾವು ಮಾಡಿದ ಸಾಲಕ್ಕೆ ಹೆದರಿ ಜೀವ ಕಳೆದುಕೊಂಡು ತಮ್ಮ ಕುಟುಂಬ ಬೀದಿ ಪಾಲು ಮಾಡದೆ ಧೈರ್ಯದಿಂದ ಸಮಸ್ಯೆಗಳನ್ನು  ಎದುರಿಸಿ ಕುಟುಂಬ ನಿರ್ವಹಣೆ ಮಾಡಲು ಪ್ರತಿಯೊಬ್ಬ ರೈತರು ಮುಂದಾಗಬೇಕು ಎಂದು ಪಾಟೀಲ ಹೇಳಿದರು. ಅಧಿಕಾರ ಇರ್ಲಿ ಇಲ್ಲದೆ ಹೋಗಲಿ  ರೈತರಿಗಾಗಿ  ನಿಮ್ಮ ಮನೆ ಮಗನಾಗಿ ನಿಮ್ಮ ಕಷ್ಟ ಸುಖದಲ್ಲಿ ಭಾಗಿಯಾಗಿ   ಸಮಸ್ಯೆಗಳನ್ನು ಸ್ಫಂಧಿಸಿ ಪರಿಹಾರ ಮಾಡುವುದು ಪ್ರಮುಖ ಗುರಿಯಾಗಿದೆ ಎಂದು ರೈತರಿಗೆ ದೈರ್ಯ ತುಂಬಿದರು.

ನಮ್ಮ ತಂದೆಯವರಾದ ಎಂ.ವೈ. ಪಾಟೀಲರು ಶಾಸಕರಾಗಿ ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮದಲ್ಲಿ ಇರುವ ಮೂಲಭೂತ ಸೌಕರ್ಯಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ನಾನು ಕೂಡಾ ಅವರ ಜೊತೆ ಜನರ ಸಮಸ್ಯೆಗಳನ್ನು ಪರಿಹರಿಸಲು  ಅವರ ಜೊತೆಗೆ ಶ್ರಮಿಸುತ್ತೇವೆ ಎಂದು ಅರುಣಕುಮಾರ ಪಾಟೀಲ ಹೇಳಿದರು.

ಈ ಸಂದರ್ಭದಲ್ಲಿ ಫರಹತಾಬಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ತಿಬಶೆಟ್ಟಿ, ಡಿಸಿಸಿ ಬ್ಯಾಂಕ್ನಿ ರ್ದೇಶಕರಾದ ಶರಣಬಸಪ್ಪ ಪಾಟೀಲ ಅಷ್ಟಗಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಮರಗೋಳ, ಗ್ರಾ.ಪಂ.ಅಧ್ಯಕ್ಷ ಅಯ್ಯಣ್ಣ ಪೂಜಾರಿ, ಮುಖಂಡರಾದ ನಾನಾಗೌಡ ಪಾಟೀಲ, ಕುಮಾರಗೌಡ ಪಾಟೀಲ ಸೇರಿದಂತೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420