ಆಳಂದ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎ.ವ್ಹಿ ಪಾಟೀಲ್ ಪದವಿ ಮಹಾ ವಿದ್ಯಾಲಯದಲ್ಲಿ ಇಂದು ದಿ. ಮಹಾದೇವಪ್ಪ ರಾಂಪುರೆಯವರ 100ನೇ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರೊ. ಎಸ್ ಎಸ್ ಕಮ್ಮಾರ ರಾಂಪುರೆಯವರ ಜೀವನ ಮತ್ತು ಹೋರಾಟದ ಹಾದಿಯ ಬಗ್ಗೆ ವಿವರವಾಗಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಡಾ.ಎಸ್. ಡಿ.ಭದಿ೯ಯವರು ಮಾತನಾಡುತ್ತಾ, ಮಹಾದೇವಪ್ಪ ರಾಂಪುರೆಯವರ ಜೀವನ ಹೋರಾಟಕ್ಕೆ ಮೀಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅವರು ಅಕ್ಷರ ಕ್ರಾಂತಿಯನ್ನೇ ಸೃಷ್ಟಿಸಿದ ಮಹಾನರು. ಗ್ರಾಮೀಣ ಪ್ರದೇಶದಲ್ಲಿ ಕಾಲೇಜುಗಳುನ್ನು ಪ್ರಾರಂಭಿಸಿ ಮನೆ ಮನೆಗಳಲ್ಲಿ ಅಕ್ಷರ ದೀಪ ಹಚ್ಚಿ ಗ್ರಾಮೀಣ ಮಹಿಳೆಯರಿಗೆ ದಾರಿ ದೀಪವಾದರು.
ಆಗೀನ ಕಾಲದಲ್ಲಿ ಈ ಭಾಗದಲ್ಲಿ ತಾಂತ್ರಿಕ, ವೈದ್ಯಕೀಯ ವಿದ್ಯಾಲಯಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳ ದಾಹ ನೀಗೀಸಿದ ಮಹಾನರು. ರಾಜಕೀಯವಾಗಿ, ಶೈಕ್ಷಣಿಕ ವಾಗಿ, ಸಾಂಸ್ಕೃತಿಕವಾಗಿ ಈ ಭಾಗವನ್ನು ಶ್ರೀಮಂತಗೊಳಿಸಿದರು. ಮೂರು ಬಾರಿ ಲೋಕಸಭೆ ಸದಸ್ಯರಾಗಿ ರಾಜಕೀಯ ಇಚ್ಛಾಶಕ್ತಿಯನ್ನು ತೋರಿಸುತ್ತ ಅಭಿವೃದ್ಧಿಗಾಗಿ ಹಗಲಿರುಳು ಶ್ರಮವಹಿಸಿ ದ ಮಹಾನುಭಾವರು ಎಂದು ಸಭೆಯನ್ನುದ್ದೆಸಿಸಿ ಮಾತನಾಡಿದರು.
ಕೊನೆಯಲ್ಲಿ ಪ್ರೊ. ಸಂಗೀತಾ ಯಳಸಂಗಿ ಯವರ ವಂದನಾಪ೯ಣೆಯೊಂದಿಗೆ ಕಾಯ೯ಕ್ರಮ ಮುಕ್ತಾಯಗೊಂಡಿತು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…