ಶಾಸಕ ರಾಜುಗೌಡಗೆ ಸಚಿವ ಸ್ಥಾನ ನೀಡಲು ಅನೇಕ ಮುಖಂಡರ ಮನವಿ

0
35

ಸುರಪುರ: ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಸುರಪುರ ಮತಕ್ಷೇತ್ರದ ಅನೇಕ ಮುಖಂಡರು ಬಿಜೆಪಿ ಪಕ್ಷದ ಮುಖಂಡರಿಗೆ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಮಾಡಿದ್ದಾರೆ.

ಮುಖಂಡರಾದ ನಗರ ಯೋಜನಾ ಪ್ರಾಧಿಕಾರದ ಸದಸ್ಯರು ಹಾಗು ಪ್ರಥಮ ದರ್ಜೆ ಗುತ್ತೇದಾರರಾದ ವೀರಭದ್ರಪ್ಪ ಆರ್.ಕುಂಬಾರ ಮಾತನಾಡಿ,ರಾಜ್ಯದಲ್ಲಿ ಬಿಜೆಪಿ ಪಕ್ಷದ ಬೆಳವಣಿಗೆಗೆ ಎಸ್ಟಿ ಮೋರ್ಚಾದ ಅಧ್ಯಕ್ಷರಾಗಿ ತಮ್ಮದೆ ಆದ ಕೊಡುಗೆ ನೀಡಿರುವ ಹಾಗು ಹಿಂದೆ ಸಣ್ಣ ಕೈಗಾರಿಕೆ ಸಚಿವರಾಗಿ ಅಭೀವೃಧ್ಧಿಯ ಸಾಧನೆ ಮಾಡಿರುವ ನಮ್ಮ ನಾಯಕರಾದ ನರಸಿಂಹ ನಾಯಕ (ರಾಜುಗೌಡ) ಅವರು ಸದ್ಯ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷರಾಗಿ ಒಬ್ಬ ಸಚಿವರ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

Contact Your\'s Advertisement; 9902492681

ಇಂತಹ ಮಹಾನ್ ನಾಯಕರಿಗೆ ಈಬಾರಿಯ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರನ್ನಾಗಿ ಮಾಡಬೇಕೆಂಬುದು ಸುರಪುರ ಮತಕ್ಷೇತ್ರದ ಸಮಸ್ತ ಬಿಜೆಪಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರು ಮತ್ತು ಕ್ಷೇತ್ರದ ಜನರ ಮನವಿಯಾಗಿದೆ.ಆದ್ದರಿಂದ ಈಬಾರಿ ರಾಜುಗೌಡ ಅವರಿಗೆ ಮಂತ್ರಿಸ್ಥಾನ ನೀಡುವ ಮೂಲಕ ನಮ್ಮ ಜಿಲ್ಲೆಗೆ ನ್ಯಾಯ ಒದಗಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಅಲ್ಲದೆ ನಗರಸಭೆ ನಾಮನಿರ್ದೇಶಿತ ಸದಸ್ಯರಾದ ಹರೀಶ್ ತ್ರಿವೇದಿ,ಪೇಠ ಅಮ್ಮಾಪುರ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಹಾಗು ರಾಜುಗೌಡ ಜನಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಕೋಳಿಹಾಳ,ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಮೇಶಗೌಡ ಗುತ್ತೇದಾರ, ಮಲ್ಲು ವಿಷ್ಣುಸೇನಾ,ಬಿಜೆಪಿ ಯುವ ಮೋರ್ಚಾದ ಮುಖಂಡ ಜಗದೀಶ ಪಾಟೀಲ್ ಸೂಗುರು,ಶರಣು ಹಸನಾಪುರ, ಸಮಾಜ ಸೇವಕ ರಾಘವೇಂದ್ರ ಎಲಿಗಾರ,ಸೋಮಯ್ಯ ಹಾಲಗೇರಾ ಸೇರಿದಂತೆ ಅನೇಕರು ಬಿಜೆಪಿ ಪಕ್ಷಕ್ಕೆ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ವಿನಂತಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here