ಸುರಪುರ: ಕೃಷ್ಣಾ ನದಿಗೆ ೪ ಲಕ್ಷ ಕ್ಯೂಸೆಕ್ಗಿಂತಲೂ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಮುಳುಗಡೆಯಾಗಿರುವ ದೇವಾಪುರ ಶೆಳ್ಳಗಿ ಕರ್ನಾಳ ಮತ್ತತರೆ ಪ್ರವಾಹ ಸ್ಥಳಗಳಿಗೆ ಶನಿವಾರ ಸಂಜೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಹಾಗು ಜಿಲ್ಲಾಧಿಕಾರಿ ಡಾ: ರಾಗಪ್ರಿಯ ಆರ್,ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಶಿಲ್ಪಾ ಶರ್ಮಾ ಸೇರಿದಂತೆ ಅನೇಕ ಜನ ಅಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದರು.
ಶಾಸಕ ರಾಜುಗೌಡಗೆ ಸಚಿವ ಸ್ಥಾನ ನೀಡಲು ಅನೇಕ ಮುಖಂಡರ ಮನವಿ
ಈ ಸಂದರ್ಭದಲ್ಲಿ ಶಾಸಕ ರಾಜುಗೌಡರನ್ನು ಭೇಟಿ ಮಾಡಿದ ಅನೇಕ ಜನ ರೈತರು ತಮ್ಮ ಜಮೀನು ಮುಳುಗಡೆಯಾದ ಬಗ್ಗೆ ಹಾಗು ಕಳೆದ ವರ್ಷವು ಪರಿಹಾರ ಬಾರದಿರುವ ಬಗ್ಗೆ ಗಮನ ಸೆಳೆದರು.ಈ ಎಲ್ಲಾ ರೈತರನ್ನುದ್ದೇಶಿಸಿ ಶಾಸಕ ರಾಜುಗೌಡ ಮಾತನಾಡಿ,ಹಿಂದೆ ನೆರೆ ಪರಿಹಾರ ವಿತರಣೆಯಲ್ಲಿ ಸ್ವಲ್ಪ ಲೋಪವಾಗಿದೆ.ಆದರೆ ಈಬಾರಿ ಆರೀತಿಯ ಯಾವುದೇ ಲೋಪವಾಗದಂತೆ ಕ್ರಮವಹಿಸುವುದಾಗಿ ತಿಳಿಸಿದರು.
ಅಲ್ಲದೆ ಈಗಾಗಲೇ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತಿ ಸಿಇಒ ಅವರು ಮತ್ತು ತಹಸೀಲ್ದಾರರು ಹಾಗು ಕಂದಾಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ನಿರಂತರವಾಗಿ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ಕ್ರಮ ಕೈಗೊಳ್ಳುತ್ತಿದ್ದಾರೆ.ರೈತರು ಯಾವುದೇ ರೀತಿಯಲ್ಲಿ ಚಿಂತೆ ಮಾಡಬೇಕಿಲ್ಲ ಈಬಾರಿ ಎಲ್ಲ ರೀತಿಯ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ನಂತರ ತಾಲೂಕಿನ ಶೆಳ್ಳಗಿ ಕರ್ನಾಳ ಗ್ರಾಮಗಳಲ್ಲಿ ಮುಳುಗಡೆಯಾಗಿರುವ ರೈತರ ಜಮೀನುಗಳ ವೀಕ್ಷಣೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಶಾಂತ ಅನಗಂಡಿ,ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…