ಆಳಂದ:ಜಿಲ್ಲೆಯ ಹಿರಿಯ ಬಿಜೆಪಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಪರಿಶಿಷ್ಟ ಪಂಗಡ ವಾಲ್ಮೀಕಿ ಸಮುದಾಯದ ಮುಖಂಡರು ಬಿಜೆಪಿ ವರಿಷ್ಠರಲ್ಲಿ ಆಗ್ರಹ ಮಾಡಿದ್ದಾರೆ.
ಆಳಂದ ಮತಕ್ಷೇತ್ರದಿಂದ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಇವರು ಜಿಲ್ಲೆಯಲ್ಲಿಯೇ ಅತ್ಯಂತ ಹಿರಿಯ ಬಿಜೆಪಿ ಶಾಸಕರಾಗಿದ್ದಾರೆ ಅಲ್ಲದೇ ತಾಲೂಕಿನಲ್ಲಿ ಪರಿಶಿಷ್ಟ ಪಂಗಡಗಳ ವರ್ಗದ ಕಲ್ಯಾಣಕ್ಕಾಗಿ ಅನೇಕ ಜನಪರ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಾಲ್ಮೀಕಿ ಸಮುದಾಯದ ಜನರ ಏಳಿಗೆಗಾಗಿ ನೀರಾವರಿ ಯೋಜನೆಯನ್ನು ತಾಲೂಕಿನ ನಸೀರವಾಡಿ ಗ್ರಾಮದಲ್ಲಿ ಅನುಷ್ಠಾನಗೊಳಿಸಿದ್ದಾರೆ.
ಅಲ್ಲದೇ ಈ ಸಮುದಾಯದ ಅಭಿವೃದ್ಧಿಗಾಗಿ ನಿರಂತರ ಶ್ರಮಿಸಿದ್ದಾರೆ ಅವರ ಸೇವಾ ಮನೋಭಾವನೆ ಮತ್ತು ಸರ್ವ ಸಮುದಾಯಗಳನ್ನು ಸಮನಾಗಿ ಕಂಡು ಎಲ್ಲರನ್ನು ಜೊತೆಯಾಗಿ ಕರೆದುಕೊಂಡು ಹೋಗುವ ಸ್ವಭಾವವನ್ನು ನೋಡಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸಂಪುಟದಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರರಿಗೆ ಸಚಿವರನ್ನಾಗಿ ಮಾಡಿ ಹೊಸ ಇತಿಹಾಸ ರಚನೆಗೆ ಅವಕಾಶ ಮಾಡಿಕೊಡಬೇಕೆಂದು.
ಭಾರತೀಯ ಜನತಾ ಪಕ್ಷದ ವರಿಷ್ಠರಲ್ಲಿ ಸಮುದಾಯದ ಮುಖಂಡರಾದ ತಾ.ಪಂ ಮಾಜಿ ಸದಸ್ಯೆ ಶಿವಮ್ಮ ಬಸವರಾಜ ಪಾಟೀಲ, ಪುರಸಭೆ ಸದಸ್ಯೆ ಕವಿತಾ ಗೋವಿಂದ, ಕಾಶಪ್ಪ ಜಮಾದಾರ ಶುಕ್ರವಾಡಿ, ಬಸವರಾಜ ಪಾಟೀಲ ನಸೀರವಾಡಿ ಅಶೋಕ ಜಮಾದಾರ ಸಾಲೇಗಾಂವ, ದತ್ತಾ ಜಮಾದಾರ ಹೊನ್ನಳ್ಳಿ, ಅಶೋಕ ಜಮಾದಾರ ಶಿರೂರ ಜಿ, ಶಿವುಕುಮಾರ ಜಮಾದಾರ ಖಂಡಾಳ ಸೇರಿದಂತೆ ಅನೇಕ ಮುಖಂಡರು ಮನವಿ ಮಾಡಿದ್ದಾರೆ.