ಆಳಂದ:ಜಿಲ್ಲೆಯ ಹಿರಿಯ ಬಿಜೆಪಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಪರಿಶಿಷ್ಟ ಪಂಗಡ ವಾಲ್ಮೀಕಿ ಸಮುದಾಯದ ಮುಖಂಡರು ಬಿಜೆಪಿ ವರಿಷ್ಠರಲ್ಲಿ ಆಗ್ರಹ ಮಾಡಿದ್ದಾರೆ.
ಆಳಂದ ಮತಕ್ಷೇತ್ರದಿಂದ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಇವರು ಜಿಲ್ಲೆಯಲ್ಲಿಯೇ ಅತ್ಯಂತ ಹಿರಿಯ ಬಿಜೆಪಿ ಶಾಸಕರಾಗಿದ್ದಾರೆ ಅಲ್ಲದೇ ತಾಲೂಕಿನಲ್ಲಿ ಪರಿಶಿಷ್ಟ ಪಂಗಡಗಳ ವರ್ಗದ ಕಲ್ಯಾಣಕ್ಕಾಗಿ ಅನೇಕ ಜನಪರ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಾಲ್ಮೀಕಿ ಸಮುದಾಯದ ಜನರ ಏಳಿಗೆಗಾಗಿ ನೀರಾವರಿ ಯೋಜನೆಯನ್ನು ತಾಲೂಕಿನ ನಸೀರವಾಡಿ ಗ್ರಾಮದಲ್ಲಿ ಅನುಷ್ಠಾನಗೊಳಿಸಿದ್ದಾರೆ.
ಅಲ್ಲದೇ ಈ ಸಮುದಾಯದ ಅಭಿವೃದ್ಧಿಗಾಗಿ ನಿರಂತರ ಶ್ರಮಿಸಿದ್ದಾರೆ ಅವರ ಸೇವಾ ಮನೋಭಾವನೆ ಮತ್ತು ಸರ್ವ ಸಮುದಾಯಗಳನ್ನು ಸಮನಾಗಿ ಕಂಡು ಎಲ್ಲರನ್ನು ಜೊತೆಯಾಗಿ ಕರೆದುಕೊಂಡು ಹೋಗುವ ಸ್ವಭಾವವನ್ನು ನೋಡಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸಂಪುಟದಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರರಿಗೆ ಸಚಿವರನ್ನಾಗಿ ಮಾಡಿ ಹೊಸ ಇತಿಹಾಸ ರಚನೆಗೆ ಅವಕಾಶ ಮಾಡಿಕೊಡಬೇಕೆಂದು.
ಭಾರತೀಯ ಜನತಾ ಪಕ್ಷದ ವರಿಷ್ಠರಲ್ಲಿ ಸಮುದಾಯದ ಮುಖಂಡರಾದ ತಾ.ಪಂ ಮಾಜಿ ಸದಸ್ಯೆ ಶಿವಮ್ಮ ಬಸವರಾಜ ಪಾಟೀಲ, ಪುರಸಭೆ ಸದಸ್ಯೆ ಕವಿತಾ ಗೋವಿಂದ, ಕಾಶಪ್ಪ ಜಮಾದಾರ ಶುಕ್ರವಾಡಿ, ಬಸವರಾಜ ಪಾಟೀಲ ನಸೀರವಾಡಿ ಅಶೋಕ ಜಮಾದಾರ ಸಾಲೇಗಾಂವ, ದತ್ತಾ ಜಮಾದಾರ ಹೊನ್ನಳ್ಳಿ, ಅಶೋಕ ಜಮಾದಾರ ಶಿರೂರ ಜಿ, ಶಿವುಕುಮಾರ ಜಮಾದಾರ ಖಂಡಾಳ ಸೇರಿದಂತೆ ಅನೇಕ ಮುಖಂಡರು ಮನವಿ ಮಾಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…