ಸಂವಿಧಾನ ಭಾರತೀಯರ ಧರ್ಮಗ್ರಂಥವಾಗಲಿ: ಲಿಂಗರಾಜ ತಾರಫೈಲ

ಕಲಬುರಗಿ: ತಾಲೂಕಿನ ನಡುವಿನಹಳ್ಳಿ ಗ್ರಾಮದಲ್ಲಿ ಡಿಎಮ್.ಎಸ್.ಎಸ್.ಸಂಘಟನೆಯ ನೂತನ ಗ್ರಾಮ ಶಾಖೆ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಡಿಎಮ್.ಎಸ್.ಎಸ್ ರಾಜ್ಯಾಧ್ಯಕ್ಷ ಲಿಂಗರಾಜ ತಾರಫೈಲ ಅವರು ಮಾತನಾಡಿ ಸಂವಿಧಾನದ ಅಡಿಯಲ್ಲಿ ಭಾರತದ ಪ್ರತಿಯೊಬ್ಬ ನಾಗರಿಕರಿಗೂ ಮೂಲಭೂತ ಹಕ್ಕುಗಳಿವೆ. ಭಾರತವು ಹಲವಾರು ಧರ್ಮ, ಜಾತಿ, ಬುಡಕಟ್ಟು, ಭಾಷೆ ಪ್ರದೇಶಗಳ ಜನರನ್ನು ಒಳಗೊಂಡ ಸುಂದರವಾದ ಶ್ರೇಷ್ಟ ದೇಶವಾಗಿದೆ.

ಎಲ್ಲರೂ ಸೌಹಾರ್ದ ಜಾತಿ ಸಹೋದರತ್ವದ ಭಾವನೆಗಳೊಂದಿಗೆ ಈ ದೇಶದಲ್ಲಿ ಬದುಕುವದಾದರೆ ದೇಶ ಸದೃಡವಾಗಿರಲು ಸಂವಿಧಾನ ಭಾರತೀಯರ ಧರ್ಮಗ್ರಂಥವಾಗಬೇಕೆಂದು ಆಶಯ ವ್ಯಕ್ತಪಡಿಸಿ ಇಂದಿನ ಎಲ್ಲಾ ಸಮುದಾಯದ ನಾವುಗಳು ಸುರಕ್ಷಿತವಾಗಿ ಬದುಕಲು ನಮಗೊಸ್ಕರ ನಮ್ಮ ಮುಂದಿನ ಯುವ ಪೀಳಿಗೆಗಾಗಿ ನಮ್ಮ ಸಂವಿಧಾನವನ್ನು ಅದರ ಆದರ್ಶಗಳನ್ನು ರಕ್ಷಿಸಬೇಕು. ಮತ್ತು ಭಾರತದ ಸಂವಿಧಾನ ಪೂರ್ಣವಾಗಿ ಯುವಜನಾಂಗ ಓದಬೇಕು ಹಾಗೂ ಸಂವಿಧಾನ ಕುರಿತು ಜನರಿಗೆ ಅರಿವು ಜಾಗೃತಿ ಮೂಡಿಸಬೇಕೆಂದು ನೂತನ ಶಾಖೆ ಪದಾಧಿಕಾರಿಗಳಿಗೆ ಕರೆಕೊಟ್ಟರು.

ರಾಜ್ಯ ಪ್ರಧಾನಕಾರ್ಯದರ್ಶಿ ಬಸವರಾಜ ಜವಳಿ ಮಾತನಾಡಿ ದಲಿತ ಚಳುವಳಿಯ ನೇತಾರ ಮಹಾತ್ಮ ಪ್ರೋ.ಬಿ.ಕೃಷ್ಣಪ್ಪ ನವರ ಆದರ್ಶ ಸಿದ್ಧಾಂತಗಳನ್ನು ಮುಂದಿಟ್ಟುಕೊಂಡು ಡಿ.ಎಂ.ಎಸ್.ಎಸ್.ಸಂಘಟನೆಯು ಅವರ ಆಸೆಯಂತೆ ಅವರ ಕನಸುಗಳನ್ನು ಸಹಕಾರಗೊಳಿಸಲು ಗ್ರಾಮೀಣ ಭಾಗದಲ್ಲಿ ಇರುವಂತಹ ಜನಾಂಗವನ್ನು ಜಾಗೃತಗೊಳಿಸುತ್ತ ಅನ್ಯಾಯಕ್ಕೆ ಒಳಗಾಗುತ್ತಿರುವ ಮಹಿಳೆಯರ ಸುರಕ್ಷತೆಯ ಬಗ್ಗೆ ಶಿಕ್ಷಣ, ರಾಜಕೀಯ, ಉದ್ಯೋಗ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಸರಾಯಿ, ಜೂಜು,ಮಟಾಕ ಮತ್ತು ಮೌಡ್ಯಚಾರಣೆಗಳಾದ ದೇವದಾಸಿಯಂತಹ ಅನಿಷ್ಟ ಪದ್ಧತಿಯಿಂದ ಜನರನ್ನು ಮುಕ್ತಗೊಳಿಸಲು ಸಂಘಟನೆಯು ಜಿಲ್ಲೆಯಲ್ಲಿ ನೂತನ ಗ್ರಾಮ ಶಾಖೆಗಳನ್ನು ಉದ್ಘಾಟನೆ ಮಾಡುವುದರ ಮೂಲಕ ಜನಜಾಗೃತಿ ಕಾರ್ಯ ಮಾಡುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ನೂತನ ಗ್ರಾಮ ಶಾಖೆಯ ೯ ಜನ ಸದಸ್ಯರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಗ್ರಾಮದ ಮುಖಂಡರಾದ ಶರಣಗೌಡ ಹೊನಗುಂಟಾ ರವರು ವಹಿಸಿದ್ದು, ಈ ಸಂದರ್ಭದಲ್ಲಿ ಶರಣಪ್ಪ ಸುಬೇದಾರ, ರಾಜು ಸಾಹುಕಾರ ಬಾಳಿ, ಮರಲಿಂಗ ಮಲ್ಲಾಬಾದಿ, ಈಶ್ವರ ಹಳ್ಳಿ, ವಿಜಯಕುಮಾರ ದೊಡ್ಡಮನಿ, ಸಂತೋಷ ಪಾಟೀಲ, ಉಪಸ್ಥಿತರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

6 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

9 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

13 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

14 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

16 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420