ಕಲಬುರಗಿ: ದಕ್ಷಿಣ ಮತಕ್ಷೇತ್ರದ ಜನಪ್ರೀಯ ಶಾಸಕ ದತ್ತಾತ್ರೇಯ ಸಿ.ಪಾಟೀಲ ರೇವೂರ ಅವರಿಗೆ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರಮೇಶ್ವರ ಆರ್. ಯಳಮೇಲಿ ಹೀರಾಪೂರ ಅವರು, ನೂತನ ಮುಖ್ಯಮಂತ್ರಿ ಮತ್ತು ಬಿಜೆಪಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಇದಕ್ಕೂ ಮೊದಲು ಇವರ ತಂದೆ ಅವರರಾದ ದಿ. ಚಂದ್ರಶೇಖರ ಪಾಟಿಲ್ ರೇವೂರ ಅವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದರೂ ಕುಡ ಸಚಿವ ಸ್ಥಾನದಿಂದ ವಂಚಿತರಾಗಿರುತ್ತಾರೆ. ಕಲಬುರಗಿ ಜನರ ಸೇವೆ ಮಾಡಿದ್ದಾರೆ. ಕಳೆದ ಸಚಿವ ಸಂಪುಟದಲ್ಲಿ ಇವರಿಗೂ ಕುಡಾ ಸಚಿವ ಸ್ಥಾನ ತಪ್ಪಿದೆ.
ಶಾಸಕ ದತ್ತಾತ್ರೇಯ ಸಿ.ಪಾಟೀಲ ರೇವೂರ ಅವರು ಎರಡು ಸಲ ಶಾಸಕರಾಗಿ ಆಯ್ಕೆಯಾಗಿರುವ ಅವರು, ಈ ಭಾಗದಲ್ಲಿ ಪಕ್ಷವನ್ನು ಬಲಪಡಿ ಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿ ಈ ಭಾಗದ ಕಲ್ಯಾಣಕ್ಕಾಗಿ ವಿನೂತನ ಯೋಜನೆಗಳಿಗೆ ಅನುದಾನ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತಿದ್ದು. ಇವರನ್ನು ಮಂತ್ರಿ ಮಾಡುವಂತೆ ಯಳಮೇಲಿ ಅವರು ಮನವಿ ಮಾಡಿದ್ದಾರೆ.