ರಸ್ತೆ ಕಾಮಗಾರಿ, ಶಿಥಿಲಾವಸ್ಥೆ ಶಾಲೆಯನ್ನು ಪರಿಶೀಲಿಸಿದ ಅಂಜಲಿ ಕಂಬಾನೂರ

0
76

ಶಹಾಬಾದ: ನಗರಸಭೆ ವ್ಯಾಪ್ತಿಯ ವಾರ್ಡ್ ನಂಬರ್ ೧೩ ರ ಸಿದ್ಧಾರ್ಥ ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನಗರಸಭೆ ಅಧ್ಯಕ್ಷರಾದ ಅಂಜಲಿ ಗಿರೀಶ್ ಕಂಬಾನೂರ ಹಾಗೂ ಉಪಾಧ್ಯಕ್ಷೆ ಸಲೀಮಾಬೇಗಂ ಭೇಟಿ ನೀಡಿ ಪರಿಶೀಲಿಸಿದರು.

ಪರಿಶೀಲಿಸಿದ ನಂತರ ಮಾತನಾಡಿದ ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಈಗಾಗಲೇ ನಗರಸಭೆಯ ಸಾಮನ್ಯ ಸಭೆಯಲ್ಲೂ ಈ ಬಗ್ಗೆ ಶಾಸಕರ ಗಮನಕ್ಕೂ ತರಲಾಗಿದೆ.ಶಾಸಕ ಬಸವರಾಜ ಮತ್ತಿಮಡು ಅವರು ಶಾಲಾ ಹೊಸ ಕಟ್ಟಡ ನಿರ್ಮಾಣಕ್ಕೆ ಸುಮಾರು ೧೦ ಲಕ್ಷ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ.

Contact Your\'s Advertisement; 9902492681

ಶೀಘ್ರದಲ್ಲಿಯೇ ಹೊಸ ಕಟ್ಟಡ ನಿರ್ಮಾಣವಾಗುವ ನಿಟ್ಟಿನಲ್ಲಿ ಶಾಸಕರ ಗಮನಕ್ಕೆ ತರುತ್ತೆವೆ.ಅಲ್ಲದೇ ವಾರ್ಡ ನಂ.೧೧, ೧೨, ೧೩ ಕ್ಕೆ ಸಂಪರ್ಕ ರಸ್ತೆ ಇಲ್ಲದ ಕಾರಣ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿರುವುದನ್ನು ಅರಿತು ಈ ಬಾರಿ ೧೫ನೇ ಹಣಕಾಸು ಯೋಜನಯಡಿ ರಸ್ತೆ ನಿರ್ಮಾಣ ಮಾಡಲು ನಿರ್ಧಾರವೂ ಕೈಗೊಂಡಿದ್ದೆವೆ.ನಗರದ ಅಭಿವೃದ್ಧಿ ಮಾಡುವುದು ನಮ್ಮ ಕರ್ತವ್ಯ.ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತೆನೆ.ಅದಕ್ಕಾಗಿ ಸಾರ್ವಜನಿಕರು ತಾಳ್ಮೆಯಿಂದ ಸಹಕರಿಸಬೇಕೆಂದು ಹೇಳಿದರು.

ಅಲ್ಲದೇ ಸಿದ್ಧಾರ್ಥ ನಗರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯೂ ಪರಿಶೀಲಿಸಿದರು. ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ನಗರಸಭೆ ಸದಸ್ಯ ರಜನಿಕಾಂತ ಕಂಬಾನೂರ, ಸರಕಾರಿ ಶಾಲೆಯ ಮುಖ್ಯಗುರುಮಾತೆ ಜಯಶ್ರೀ ಜಾಧವ, ಶಿಕ್ಷಕರು ಹಾಗೂ ಬಡಾವಣೆಯ ನಾಗರಿಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here