ಶಹಾಬಾದ: ನಗರಸಭೆ ವ್ಯಾಪ್ತಿಯ ವಾರ್ಡ್ ನಂಬರ್ ೧೩ ರ ಸಿದ್ಧಾರ್ಥ ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನಗರಸಭೆ ಅಧ್ಯಕ್ಷರಾದ ಅಂಜಲಿ ಗಿರೀಶ್ ಕಂಬಾನೂರ ಹಾಗೂ ಉಪಾಧ್ಯಕ್ಷೆ ಸಲೀಮಾಬೇಗಂ ಭೇಟಿ ನೀಡಿ ಪರಿಶೀಲಿಸಿದರು.
ಪರಿಶೀಲಿಸಿದ ನಂತರ ಮಾತನಾಡಿದ ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಈಗಾಗಲೇ ನಗರಸಭೆಯ ಸಾಮನ್ಯ ಸಭೆಯಲ್ಲೂ ಈ ಬಗ್ಗೆ ಶಾಸಕರ ಗಮನಕ್ಕೂ ತರಲಾಗಿದೆ.ಶಾಸಕ ಬಸವರಾಜ ಮತ್ತಿಮಡು ಅವರು ಶಾಲಾ ಹೊಸ ಕಟ್ಟಡ ನಿರ್ಮಾಣಕ್ಕೆ ಸುಮಾರು ೧೦ ಲಕ್ಷ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ.
ಶೀಘ್ರದಲ್ಲಿಯೇ ಹೊಸ ಕಟ್ಟಡ ನಿರ್ಮಾಣವಾಗುವ ನಿಟ್ಟಿನಲ್ಲಿ ಶಾಸಕರ ಗಮನಕ್ಕೆ ತರುತ್ತೆವೆ.ಅಲ್ಲದೇ ವಾರ್ಡ ನಂ.೧೧, ೧೨, ೧೩ ಕ್ಕೆ ಸಂಪರ್ಕ ರಸ್ತೆ ಇಲ್ಲದ ಕಾರಣ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿರುವುದನ್ನು ಅರಿತು ಈ ಬಾರಿ ೧೫ನೇ ಹಣಕಾಸು ಯೋಜನಯಡಿ ರಸ್ತೆ ನಿರ್ಮಾಣ ಮಾಡಲು ನಿರ್ಧಾರವೂ ಕೈಗೊಂಡಿದ್ದೆವೆ.ನಗರದ ಅಭಿವೃದ್ಧಿ ಮಾಡುವುದು ನಮ್ಮ ಕರ್ತವ್ಯ.ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತೆನೆ.ಅದಕ್ಕಾಗಿ ಸಾರ್ವಜನಿಕರು ತಾಳ್ಮೆಯಿಂದ ಸಹಕರಿಸಬೇಕೆಂದು ಹೇಳಿದರು.
ಅಲ್ಲದೇ ಸಿದ್ಧಾರ್ಥ ನಗರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯೂ ಪರಿಶೀಲಿಸಿದರು. ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ನಗರಸಭೆ ಸದಸ್ಯ ರಜನಿಕಾಂತ ಕಂಬಾನೂರ, ಸರಕಾರಿ ಶಾಲೆಯ ಮುಖ್ಯಗುರುಮಾತೆ ಜಯಶ್ರೀ ಜಾಧವ, ಶಿಕ್ಷಕರು ಹಾಗೂ ಬಡಾವಣೆಯ ನಾಗರಿಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…