ಫ್ಲಿಪ್ ಕಾರ್ಟ್ ನ ಶಾಪ್ಸಿಯಿಂದ ಹಲವು ಉಪಕ್ರಮಗಳ ಘೋಷಣೆ

ಬೆಂಗಳೂರು: ಇತ್ತೀಚೆಗೆ ಶಾಪ್ಸಿಯನ್ನು ಆರಂಭಿಸಿದ್ದ ದೇಶೀಯ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ಇದೀಗ ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್ ಅನ್ನು ಪರಿಚಯಿಸಿದೆ. ಫ್ಯಾಶನ್, ಗ್ರಾಸರಿ ಮತ್ತು ಗೃಹೋಪಯೋಗಿ ಉತ್ಪನ್ನಗಳ ವಿಭಾಗದಲ್ಲಿ ಸೂಕ್ತವಾದ ಮಾರಾಟಗಾರರು ಮತ್ತು ಆಯ್ಕೆಗಳನ್ನು ತರಲು ಇದು ನೆರವಾಗುತ್ತದೆ ಎಂಬುದನ್ನು ಫ್ಲಿಪ್ ಕಾರ್ಟ್ ನಂಬಿದೆ. ಈ ಯೋಜನೆಯಿಂದಾಗಿ ವಿಸ್ತಾರವಾದ ಉತ್ಪನ್ನಗಳ ಶ್ರೇಣಿ ಮತ್ತು ಕೆಟಲಾಗ್ ಗಳನ್ನು ಹೆಚ್ಚು ಮಾಡುವುದು ಮತ್ತು 2 ನೇ ಶ್ರೇಣಿಯ ನಗರಗಳು ಮತ್ತು ಪಟ್ಟಣಗಳಲ್ಲಿ ಇ-ಕಾಮರ್ಸ್ ಅನ್ನು ಬೆಳವಣಿಗೆ ಮಾಡುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ.

ಇಂದು ಫ್ಲಿಪ್ ಕಾರ್ಟ್ ಗೆ 2 ಮತ್ತು 3 ನೇ ಶ್ರೇಣಿಯ ನಗರಗಳಲ್ಲಿ ಶೇ.70 ರಷ್ಟು ಗ್ರಾಹಕರಿದ್ದಾರೆ. ಶಾಪ್ಸಿಯೊಂದಿಗೆ ಫ್ಲಿಪ್ ಕಾರ್ಟ್ ಈ ಪ್ರಮಾಣವನ್ನು ಶೇ.90 ಕ್ಕೆ ಹೆಚ್ಚಳ ಮಾಡುವ ಉದ್ದೇಶವನ್ನು ಹೊಂದಿದೆ. ಈ ಗುರಿಯನ್ನು ಸಾಧಿಸಲು ಸಾಮಾಜಿಕ ವಾಣಿಜ್ಯ ವೈಶಿಷ್ಟ್ಯತೆಗಳೊಂದಿಗೆ ಗ್ಯಾಮಿಫಿಕೇಶನ್ ನೆರವಾಗುತ್ತದೆ ಎಂದು ಫ್ಲಿಪ್ ಕಾರ್ಟ್ ನಂಬಿದೆ. ಅಂತಹ ಒಂದು ವೈಶಿಷ್ಟ್ಯತೆಯೆಂದರೆ ಶಾಪ್ ಮತ್ತು ಗಳಿಕೆ. ಅಲ್ಲಿ ಬಳಕೆದಾರರು ಒಂದು ನಿರ್ದಿಷ್ಟ ಸಾಪ್ತಾಹಿಕ/ಮಾಸಿಕ ಗುರಿಯನ್ನು ಸಾಧಿಸಲು ಹೆಚ್ಚಿನ ಪ್ರೋತ್ಸಾಹಕಗಳನ್ನು ಅನ್ ಲಾಕ್ ಮಾಡಲು ಸಾಧ್ಯವಾಗುತ್ತದೆ. ಈ ರೀತಿಯ ಗ್ಯಾಮಿಫಿಕೇಶನ್ ಮತ್ತಷ್ಟು ವೈರಲ್ ಗೆ ಕಾರಣವಾಗುತ್ತದೆ.

● ಮಾರಾಟಗಾರರಿಗೆ ಶೂನ್ಯ ಕಮೀಷನ್ ಮಾರ್ಕೆಟ್ ಪ್ಲೇಸ್

● ಶಾಪ್ಸಿ ಆರಂಭವಾದ ಕೇವಲ ಒಂದು ತಿಂಗಳಲ್ಲಿ 2 ಲಕ್ಷಕ್ಕೂ ಅಧಿಕ ಉದ್ಯಮಿಗಳ ಸೇರ್ಪಡೆ

● ಶಾಪ್ಸಿಗೆ ಹಬ್ಬದ ಸೀಸನ್ ನಲ್ಲಿ 20 ಪಟ್ಟು ಬೆಳವಣಿಗೆ ಕಂಡುಕೊಳ್ಳುವ ಗುರಿ

ಕಳೆದ ಒಂದು ದಶಕದಲ್ಲಿ ಫ್ಲಿಪ್ ಕಾರ್ಟ್ ತನ್ನ ಗ್ರಾಹಕರಿಗೆ ತಂತ್ರಜ್ಞಾನ ಮತ್ತು ನಾವೀನ್ಯತೆಯನ್ನು ಹೆಚ್ಚಿಸುವ ಮೌಲ್ಯವನ್ನು ಅನ್ಲಾಕ್ ಮಾಡಲು ಹಲವಾರು ಉಪಕ್ರಮಗಳನ್ನು ತೆಗೆದುಕೊಂಡಿದೆ. ಇದು ಮುಂದಿನ ಪೀಳಿಗೆಯ ಸಾಮಾಜಿಕ ವಾಣಿಜ್ಯ ಪ್ಲಾಟ್ ಫಾರ್ಮ್ ನ ಯಶಸ್ಸಿಗೆ ಬಲವಾದ ಮತ್ತು ನಿರ್ಣಾಯಕವಾದ ನೆಲೆಯನ್ನು ರೂಪಿಸುತ್ತದೆ. ಶೂನ್ಯ ಕಮೀಷನ್ ಕಾರ್ಯತಂತ್ರಕ್ಕೆ ಪೂರಕವಾಗಿ ಮಾರಾಟಗಾರರು ಈಗಾಗಲೇ ಫ್ಲಿಪ್ ಕಾರ್ಟ್ ನ ಜಾಹೀರಾತು ತಂತ್ರಜ್ಞಾನ ಪ್ಲಾಟ್ ಫಾರ್ಮ್ ಅನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದಲ್ಲದೇ, ಫ್ಲಿಪ್ ಕಾರ್ಟ್ ನ ಕಡಿಮೆ ಬೆಲೆಯ ಲಾಜಿಸ್ಟಿಕ್ ನೆಟ್ ವರ್ಜ್ ಮತ್ತು ಫ್ಲಿಪ್ ಕಾರ್ಟ್ ಪೇ ಲೇಟರ್ ನಂತಹ ಕೈಗೆಟುಕುವ ಕಾರ್ಯಕ್ರಮಗಳು ಸಾಮಾಜಿಕ ವಾಣಿಜ್ಯದ ಸಂದರ್ಭದಲ್ಲಿ ಗೇಮ್ ಚೇಂಜರ್ ವೇಗವರ್ಧಕಗಳಾಗಿ ಕಾರ್ಯನಿರ್ವಹಣೆ ಮಾಡುವ ಎರಡು ಪ್ರಮುಖ ಅಸ್ತ್ರಗಳಾಗಿವೆ.

ಫ್ಲಿಪ್ ಕಾರ್ಟ್ ನ ಗ್ರೋಥ್ ಅಂಡ್ ಮಾನಿಟೈಸೇಶನ್ ನ ಹಿರಿಯ ಉಪಾಧ್ಯಕ್ಷ ಪ್ರಕಾಶ್ ಸಿಕಾರಿಯಾ ಅವರು ಮಾತನಾಡಿ, “2023 ರ ವೇಳೆಗೆ 25 ಮಿಲಿಯನ್ ಆನ್ ಲೈನ್ ಉದ್ಯಮಿಗಳು ಶಾಪ್ಸಿ ವ್ಯಾಪ್ತಿಗೆ ಬರುವಂತೆ ಮಾಡುವ ದೂರಗಾಮಿ ಗುರಿಯನ್ನು ಇಟ್ಟುಕೊಂಡಿದ್ದೇವೆ. ಇದರ ಮೂಲಕ ಉದ್ಯಮಿಗಳು ತಮ್ಮ ಉದ್ಯಮಶೀಲತ್ವದ ಗುರಿಗಳನ್ನು ಸಾಕಾರಗೊಳಿಸಿಕೊಳ್ಳಲು ಡಿಜಿಟಲ್ ಕಾಮರ್ಸ್ ನೆಡೆಗೆ ಒಲವು ತೋರುವಂತೆ ಮಾಡಲಿದ್ದೇವೆ.

ನಾವು ಶಾಪ್ಸಿಗೆ ಅಭೂತಪೂರ್ವವಾದ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದ್ದೇವೆ ಮತ್ತು ಸೇರ್ಪಡೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಹಲವಾರು ಉಪಕ್ರಮಗಳನ್ನು ಈ ಪ್ಲಾಟ್ ಫಾರ್ಮ್ ನಲ್ಲಿ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದೇವೆ. ನಾವು ವಾರದಿಂದ ವಾರಕ್ಕೆ ಶೇ.100 ರಷ್ಟು ಪ್ರಗತಿಯನ್ನು ಕಾಣುತ್ತಿದ್ದು, ಇದನ್ನು ಮತ್ತಷ್ಟು ವೇಗಗೊಳಿಸುವತ್ತ ಗಮನಹರಿಸಿದ್ದೇವೆ. ಶಾಪ್ಸಿಯು ಒಂದು ವಿಶಿಷ್ಟವಾದ ಸಾಮಾಜಿಕ ಅಪ್ಲಿಕೇಶನ್ ಆಗಿ ಪ್ರದರ್ಶನ ನೀಡುತ್ತಿದೆ ಮತ್ತು ಹೆಚ್ಚು ಹೆಚ್ಚು ಜನಪ್ರಿಯತೆಯನ್ನು ಗಳಿಸುತ್ತಿದೆ.

ಇದನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ನಾವು ಶಾಪ್ಸಿಯೊಂದಿಗೆ ನಮ್ಮ ಪ್ರಯಾಣದಲ್ಲಿ ಪ್ರಗತಿಯಾದಾಗ ಅತ್ಯುತ್ತಮವಾದ ಇ-ಕಾಮರ್ಸ್ ಅನ್ನು ಸಾಮಾಜಿಕ ವಾಣಿಜ್ಯಕ್ಕೆ ತರುವ ಗುರಿಯನ್ನು ಹೊಂದಿದ್ದೇವೆ. ಫ್ಲಿಪ್ ಕಾರ್ಟ್ ಗ್ರೂಪ್ ಭಾರತೀಯರ ಉದ್ಯಮಶೀಲತಾ ಮನೋಭಾವವನ್ನು ನಿರಂತರವಾಗಿ ಬೆಳೆಸಲು ಬದ್ಧವಾಗಿದೆ ಮತ್ತು ಈ ಸಮುದಾಯದ ಅವಕಾಶಗಳನ್ನು ಸಕ್ರಿಯಗೊಳಿಸಲು ನಾವು ತಂತ್ರಜ್ಞಾನ ಮತ್ತು ನಮ್ಮ ಜಾಲದ ವಿಸ್ತಾರವನ್ನು ಬಳಸುವುದನ್ನು ಮುಂದುವರಿಸುತ್ತಿದ್ದೇವೆ’’ ಎಂದು ತಿಳಿಸಿದರು.

ಶಾಪ್ಸಿಯನ್ನು ಆರಂಭಿಸಿದ ಕೇವಲ ಒಂದು ತಿಂಗಳಲ್ಲೇ ಇದರ ವ್ಯಾಪ್ತಿಗೆ 2 ಲಕ್ಷಕ್ಕೂ ಅಧಿಕ ರೀಸೆಲ್ಲರ್ ಗಳು ಸೇರ್ಪಡೆಗೊಂಡಿದ್ದಾರೆ. ಹಬ್ಬದ ಸೀಸನ್ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಶಾಪ್ಸಿ ಮುಂದಿನ ಎರಡು ತಿಂಗಳಲ್ಲಿ ಈ ಸಂಖ್ಯೆಯನ್ನು 20 ಪಟ್ಟು ಹೆಚ್ಚಿಸಿಕೊಳ್ಳುವ ಉದ್ದೇಶವನ್ನು ಹೊಂದಿದೆ. ಇದಕ್ಕಾಗಿ ಹಲವಾರು ವೈಶಿಷ್ಟ್ಯತೆಗಳನ್ನು ಪರಿಚಯಿಸುವುದರ ಜತೆಗೆ ಉದ್ಯಮಿಗಳು ಯಾವುದೇ ಬಂಡವಾಳಗಳಿಲ್ಲದೇ ಆನ್ ಲೈನ್ ಮೂಲಕ ತಮ್ಮ ವ್ಯವಹಾರಗಳನ್ನು ಆರಂಭಿಸುವಂತಹ ಮತ್ತಷ್ಟು ಅವಕಾಶಗಳನ್ನು ಕಲ್ಪಿಸಿಕೊಡಲಿದೆ.

ಶಾಪ್ಸಿ ಉದ್ಯಮಶೀಲ ಭಾರತೀಯರಿಗೆ ಸಾಮಾಜಿಕ ವಾಣಿಜ್ಯ ಅವಕಾಶಗಳನ್ನು ಒದಗಿಸುತ್ತದೆ. ತಮ್ಮ ಸ್ಥಳೀಯ ನೆಟ್ ವರ್ಕ್ ಅನ್ನು ಸದುಪಯೋಗಪಡಿಸಿಕೊಂಡು ಶಾಪ್ಸಿ ಬಳಕೆದಾರರು ಸಾಮಾಜಿಕ ಮಾಧ್ಯಮ ಮತ್ತು ಸಂವಹನ ಅಪ್ಲಿಕೇಶನ್ ಗಳಲ್ಲಿ ಫ್ಲಿಪ್ ಕಾರ್ಟ್ ಮಾರಾಟಗಾರರು ನೀಡುವ 16\5 ಕೋಟಿ ಉತ್ಪನ್ನಗಳ ವಿಶಾಲ ಆಯ್ಕೆಯ ಕೆಟಲಾಗ್ ಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಸರಳೀಕೃತ ಸಾಮಾಜಿಕ ಮಾಧ್ಯಮ ಇಂಟರ್ಫೇಸ್ ನಲ್ಲಿ ತನ್ನ ಕೆಟಲಾಗ್ ಮತ್ತು ಪೂರ್ಣ ಸ್ಟಾಕ್ ಇ-ಕಾಮರ್ಸ್ ಸೇವೆಗಳಿಗೆ ಪ್ರವೇಶವನ್ನು ಒದಗಿಸುವುದು, ಫ್ಲಿಪ್ ಕಾರ್ಟ್ ಕಾಮರ್ಸ್ ಅನ್ನು ಪ್ರಜಾಪ್ರಭುತ್ವಗೊಳಿಸಬಹುದಾಗಿದೆ.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

8 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

12 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

17 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

22 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420