ಕಲಬುರಗಿ: ಬೆಳೆವಿಮೆ ಯೋಜನೆಯಡಿ ನೋಂದಾಯಿಸಿದ ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ಅತಿಯಾದ ಮಳೆ, ಪ್ರವಾಹ ಅಥವಾ ಇತರೆ ಪ್ರತಿಕೂಲ ಹವಾಮಾನ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದ್ದಲ್ಲಿ ಸ್ಥಳೀಯ ವಿಪತ್ತು (Localise calamity) ಯಡಿ ಬೆಳೆವಿಮೆ ಪರಿಹಾರಕ್ಕಾಗಿ 72 ಗಂಟೆಯೊಳಗೆ ಬೆಳೆಹಾನಿ ಕುರಿತು ಮಾಹಿತಿಯನ್ನು ಯುನಿವರ್ಸಲ್ ಸೊಂಪೊ ಜೆನೆರಲ್ ಇನ್ಸುರೆನ್ಸ್ ಕಂಪನಿ ಲಿ. ಸಹಾಯವಾಣಿ ಸಂಖ್ಯೆ 1800-200-5142 ಗೆ ಕರೆ ಮಾಡಿ ವಿವರಗಳೊಂದಿಗೆ ತಮ್ಮ ಅರ್ಜಿಯನ್ನು ದಾಖಲಿಸಬಹುದಾಗಿದೆ ಎಂದು ಕಲಬುರಗಿ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 2021ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜೆನೆರಲ್ ಇನ್ಸುರೆನ್ಸ ಕಂಪನಿ ಲಿ. ವಿಮಾ ಸಂಸ್ಥೆ ನಿಗದಿಪಡಿಸಲಾಗಿದೆ.
ರೈತ ಭಾಂದವರು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಂಬಂಧಪಟ್ಟ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಹಾಗೂ ಸಹಾಯವಾಣಿ ಸಂಖ್ಯೆ 1800-200-5142 ಕರೆ ಮಾಡಿ ಮಾಹಿತಿ ನೀಡಬೇಕು. ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜೆನೆರಲ್ ಇನ್ಸ್ಸುರೆನ್ಸ್ ಕಂಪನಿ ಲಿ. ವಿಮಾ ಸಂಸ್ಥೆಯ ಈ ಕೆಳಕಂಡ ತಾಲೂಕಿನ ವಿಮಾ ಪ್ರತಿನಿಧಿಗಳನ್ನು ಸಂಪರ್ಕಿಸಬೇಕು.
ಕಲಬುರಗಿ ಜಿಲ್ಲೆ-ಮೊಬೈಲ್ ಸಂಖ್ಯೆ 9731499917, 8867508750, 9538185343, 9620006812, ಚಿತ್ತಾಪೂರ-9731499917, ಅಫಜಲಪುರ-9902356434, ಜೇವರ್ಗಿ-9731499917, ಆಳಂದ-9731499917, ಕಲಬುರಗಿ-9538185343, ಚಿಂಚೋಳಿ-8095384057, 9731499917 ಹಾಗೂ ಸೇಡಂ-7204579007 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…