Monday, July 15, 2024
ಮನೆಬಿಸಿ ಬಿಸಿ ಸುದ್ದಿಉದ್ಯೋಗ ಖಾತ್ರಿ ಸಮರ್ಪಕ ಜಾರಿಗೆ ಮಹೇಶ್ ಕುಮಾರ್ ರಾಠೊಡ್ ಆಗ್ರಹ

ಉದ್ಯೋಗ ಖಾತ್ರಿ ಸಮರ್ಪಕ ಜಾರಿಗೆ ಮಹೇಶ್ ಕುಮಾರ್ ರಾಠೊಡ್ ಆಗ್ರಹ

ಜೇವರ್ಗಿ: ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ಅರಳಗುಂಡಗಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ಮುಖಂಡ ಮಹೇಶ್ ಕುಮಾರ್ ರಾಠೊಡ್ ಆಗ್ರಹಿಸಿದ್ದಾರೆ.

ಯೋಜನೆಯ ಅಡಿಯಲ್ಲಿ ಭಾರೀ ಅವ್ಯವಹಾರವಾಗಿದೆ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಸೂಕ್ತ ಕ್ರಮಕೈಗೊಳ್ಳಲು ಸಂಪೂರ್ಣ ನಿಷ್ಕ್ರಿಯವಾಗಿದೆ. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಿಜವಾದ ಕಾರ್ಮಿಕರಿಗೆ ಕೆಲಸವನ್ನು ನೀಡದೆ ಮನೆಯಲ್ಲಿರುವ ಹಾಗೂ ವಲಸೆ ಹೋಗಿರುವ ಜನರ ಹೆಸರಿನಲ್ಲಿ ಬ್ಯಾಂಕಿನ ಖಾತೆಗಳಲ್ಲಿ ಕೂಲಿಯ ಹಣ ಜನ್ಮ ಮಾಡುತ್ತಿದ್ದು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಈ ಕುರಿತಂತೆ ಕೆಲಸ ನೀಡುವಂತೆ ಕಾರ್ಮಿಕರು ಮನವಿ ಸಲ್ಲಿಸಿದರೂ ಪ್ರಯೋಜನಕ್ಕೆ ಬರುತ್ತಿಲ್ಲ .ಈ ಕುರಿತಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಿನಾಂಕ 5ರಂದು 11:00 ಗಂಟೆಗೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಭಾರತ ಕಮಿನಿಷ್ಟ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಹೇಶ್ ಕುಮಾರ್ ರಾಠೊಡ್ ತಿಳಿಸಿದರು.

ಈ ಕುರಿತಂತೆ ಮಂಗಳವಾರ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಮನವಿ ಪತ್ರವನ್ನು ಸಲ್ಲಿಸುವಾಗ ಮಲ್ಲಿಕಾರ್ಜುನ ದೊಡ್ಡಮನಿ ಭೀಮರಾಯ ಮುದಬಸ್ಸಪ್ಪಗೋಳ, ರಾಮನಾಥ ಭಂಡಾರಿ,ಮಲ್ಲಣ್ಣಗೌಡ ಬಿರೇದಾರ, ಇತರರು ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular