ದತ್ತಾಂಶ ಸಂಗ್ರಹಣಾ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ: ರ್ನಾಟಕ ಅನುಸೂಚಿತ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳ ಸಮಗ್ರ ಮೇಲ್ವಿಚಾರಣೆಗಾಗಿ ಕಲಬುರಗಿ ವಿಭಾಗ ಮಟ್ಟದಲ್ಲಿ ಈ ಕೆಳಕಂಡ ಸಿಬ್ಬಂದಿಗಳನ್ನು ಹೊರಸಂಪನ್ಮೂಲದಿಂದ (ಹೊರಗುತ್ತಿಗೆ ಆಧಾರದ ಮೇಲೆ) ಸೇವೆ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಸಹಾಯಕ ಯೋಜನಾ ವ್ಯವಸ್ಥಾಪಕರ 01 ಹುದ್ದೆಗೆ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ/ಕೃಷಿ/ ತೋಟಗಾರಿಕೆ/ಶಿಕ್ಷಣ/ಲೋಕೋಪಯೋಗಿ/ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗಳ ಸಹಾಯಕ ನಿರ್ದೇಶಕರ ವೃಂದದ ಯೋಜನೆಗಳ ಅನುಷ್ಠಾನದಲ್ಲಿ 5 ವರ್ಷಗಳ ಅನುಭವ ಹೊಂದಿರಬೇಕು. ಸ್ನಾತಕೋತ್ತರ ಪದವಿ/ಬಿ.ಇ/ಎಂ.ಬಿ.ಎ ಪದವೀಧರ ವಿದ್ಯಾರ್ಹತೆ ಹೊಂದಿರಬೇಕು.

ದತ್ತಾಂಶ ಸಂಗ್ರಹಣ ಅಧಿಕಾರಿಗಳ 01 ಹುದ್ದೆಗೆ ಕಂಪ್ಯೂಟರ್ ಸೈನ್ಸ್, ವಾಣಿಜ್ಯ, ಸಂಖ್ಯಾಶಾಸ್ತ್ರ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವೀಧರರಾಗಿರಬೇಕು. ಮತ್ತು ಗಣಕಯಂತ್ರದ ಜ್ಞಾನವನ್ನು ಹೊಂದಿರಬೇಕು.

ಇದೇ ಆಗಸ್ಟ್ 9 ರಿಂದ ಅರ್ಜಿ ವಿತರಿಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 2021ರ ಆಗಸ್ಟ್ 19 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು, ಮೊಬೈಲ್ ಸಂಖ್ಯೆ 9449242142 ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278621ಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420