ಧರಣಿಗೆ ಮಣಿದು ಅಂಗವಿಕಲರಿಗೆ ೨೬ ಹೊಲಿಗೆ ಯಂತ್ರ ವಿತರಣೆ

ಶಹಾಬಾದ : ತಾಲೂಕಿನ ಹೊನಗುಂಟಾ ಗ್ರಾಪಂಯಲ್ಲಿ ವಿಕಲಚೇತನ ಕ್ಷೇಮಾಭಿವೃದ್ಧಿ ಸಂಘದಿಂದ ಹಾಗೂ ಜಂಟಿ ಸಂಘಟನೆ ವತಿಯಿಂದ ೧೪ನೇ ಹಣಕಾಸಿನಲ್ಲಿ ವಿಕಲಚೇತನರ ಸೌಲಭ್ಯಕ್ಕಾಗಿ ಹೊಲಿಗೆ ಯಂತ್ರ ಹಾಗೂ ಆಹಾರದ ಕಿಟ್ ವಿತರಣೆ ಮಾಡಬೇಕೆಂದು ಆಗ್ರಹಿಸಿ ಶುಕ್ರವಾರ ಗ್ರಾಮ ಪಂಚಾಯತಿ ಎದುರು ಅನಿರ್ದಿ?ವಧಿ ಧರಣಿ ಸತ್ಯಾಗ್ರಹಕ್ಕೆ ಮಣಿದ ಗ್ರಾಪಂ ಅಧಿಕಾರಿಗಳು ೨೬ ಹೊಲಿಗೆ ಯಂತ್ರ ಅಂಗವಿಕಲರಿಗೆ ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಂಗವಿಕಲ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಿ ಭಜಂತ್ರಿ, ಅಂಗವಿಕಲರಿಗೆ ಹೊಲಿಗೆ ಯಂತ್ರ ಹಾಗೂ ಕಿಟ್ ವಿತರಿಸುವಂತೆ ಧರಣಿ ನಡೆಸಲಾಗಿತ್ತು. ಧರಣಿಗೆ ಮಣಿದ ಗ್ರಾಪಂ ಅಭಿವೃದ್ಧಿ ಅಧಿಕಾರಿ ಕಾವೇರಿ ಗೋವಿಂದ ಸ್ಥಳದಲ್ಲಿಯೇ ೨೬ ಹೊಲಿಗೆ ಯಂತ್ರ ಅಂಗವಿಕಲರಿಗೆ ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಆಹಾರ ಕಿಟ್ ಬಗ್ಗೆ ಕೇಳಿದಾಗ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು.ಅಲ್ಲದೇ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಂಡು, ಅಂಗವಿಕಲರ ಆಹಾರ ಕಿಟ್ ಖಂಡಿತವಾಗಿ ನೀಡುವ ಭರವಸೆ ನೀಡಿದ್ದಾರೆ. ಅವರ ಭರವಸೆಗೆ ನಾವು ಧರಣಿ ಹಿಂದಕ್ಕೆ ತೆಗೆದುಕೊಳ್ಳುತ್ತೆವೆ.ಒಂದು ಆಹಾರ ಕಿಟ್ ನೀಡಲು ವಿಳಂ ನೀತಿ ಅನುಸರಿಸಿದರೇ ಮತ್ತೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಹೇಳಿದರು.

ದಲಿತ ವಿದ್ಯಾರ್ಥಿಗಳ ಒಕ್ಕೂಟ ತಾಲೂಕಾ ಸಂಚಾಲಕ ಪೂಜಪ್ಪ ಮೇತ್ರಿ, ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕರಾದ ರಾಯಪ್ಪ ಹುರಮುಂಜಿ, ಕರವೇ ಅಧ್ಯಕ್ಷ ವಿಶ್ವರಾಜ ಫಿರೋಜಾಬಾದ, ಗ್ರಾಮಪಂಚಾಯತಿ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಣ್ಣ ಕಾರೊಳ್ಳಿ, ಅಂಗವಿಕಲ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾಧ್ಯಕ್ಷ ಶರಣು ಬನ್ನೇರ್, ಕುರುಬ ಸಂಘದ ತಾಲೂಕಾಧ್ಯಕ್ಷ ಮಲ್ಕಣ್ಣ ಮುದ್ದಾ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮದ ಜನರು ಉಪಸ್ಥಿತರಿದ್ದರು.

emedialine

Recent Posts

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

7 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

11 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

16 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420