ಬಿಸಿ ಬಿಸಿ ಸುದ್ದಿ

ಅತಿವೃಷ್ಟಿ ಬೆಳೆ ಹಾನಿ: ದೆಹಲಿ ಆಪ್ ಸರ್ಕಾರದ ಮಾದರಿಯಲ್ಲಿ 50 ಸಾವಿರ ಪರಿಹಾರಕ್ಕೆ ಬಳ್ಳಾರಿ ಆಗ್ರಹ

ಕಲಬುರ್ಗಿ: ಅತಿವೃಷ್ಟಿ ಬೆಳೆ ಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರದಂತೆ ರೈತರ ಪ್ರತಿ ಹೆಕ್ಟೆರ್‌ಗೆ ೫೦,೦೦೦ರೂ.ಗಳ ಪರಿಹಾರವನ್ನು ರಾಜ್ಯ ಬಿಜೆಪಿ ಸರ್ಕಾರವು ರಾಜ್ಯದ ರೈತರಿಗೆ ಕೊಡಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಜಗದೀಶ್ ಬಳ್ಳಾರಿ ಅವರು ಒತ್ತಾಯಿಸಿದರು.

ಪಕ್ಷದ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅತಿವೃಷ್ಟಿ ಹಾನಿ ಪರಿಹಾರವನ್ನು ಕೇವಲ ೨೦೦೦ರೂ.ಗಳಿಂದ ೩೦೦೦ರೂ.ಗಳವರೆಗೆ ಮಾತ್ರ ಘೋಷಿಸಿದ್ದಾರೆ. ಈ ಪರಿಹಾರದಿಂದ ಯಾವುದೇ ರೀತಿಯಲ್ಲಿ ಪ್ರಯೋಜನ ಆಗದು. ಅದೂ ಅಲ್ಪ ಪರಿಹಾರಕ್ಕಾಗಿ ರೈತರು ತಮ್ಮ ಚಪ್ಪಲಿಗಳನ್ನು ಹರಿದುಕೊಂಡು ಕಚೇರಿಗೆ ಅಲೆದಾಡಬೇಕಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಕುರಿತು ಪರಿಹಾರದ ಕುರಿತು ಪುನರ್ ವಿಮರ್ಶೆ ಮಾಡಿಕೊಳ್ಳಬೇಕು. ಈಗಾಗಲೇ ಮಹಾಮಾರಿ ಕೋವಿಡ್ ಮೊದಲನೇ ಹಾಗೂ ಎರಡನೇ ಸೋಂಕಿನ ಲಾಕ್‌ಡೌನ್‌ನಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ನೆರವಿಗೆ ಬರಬೇಕು. ದೆಹಲಿ ಸರ್ಕಾರದ ಮಾದರಿಯಲ್ಲಿ ಅತಿವೃಷ್ಟಿಪೀಡಿತ ರೈತರಿಗೆ ಪ್ರತಿ ಹೆಕ್ಟೇರ್‌ಗೆ ೫೦,೦೦೦.ಗಳ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು. ಇದರಿಂದ ರೈತರ ಆತ್ಮಹತ್ಯೆಯನ್ನು ತಡೆಯಬಹುದಾಗಿದೆ. ರೈತ ಕುಟುಂಬವನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಬಿಜೆಪಿ ಸರ್ಕಾರವು ಬಂಡವಾಳಶಾಹಿ ಹಾಗೂ ಉಳ್ಳವರ ಪರವಾಗಿದೆ ಹೊರತು ರೈತ, ಕೃಷಿ ಕಾರ್ಮಿಕರು ಹಾಗೂ ಬಡವರ ಪರ ಇಲ್ಲ. ದೆಹಲಿಯಲ್ಲಿನ ಆಮ್ ಆದ್ಮಿ ಪಕ್ಷವು ಬಡವರಿಗೆ ಉಚಿತ ವಿದ್ಯುತ್ ಕೊಡುತ್ತಿದೆ. ಅಂತಹ ಕ್ರಮವನ್ನು ರಾಜ್ಯದಲ್ಲಿಯೂ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಆಮ್ ಆದ್ಮಿ ಪಕ್ಷಕ್ಕೆ ಸದಸ್ಯತ್ವದ ಸಮಸ್ಯೆ ಇಲ್ಲ. ಪಕ್ಷದ ಕಾರ್ಯಕರ್ತರು ಹೋದಲ್ಲೆಲ್ಲ ಸ್ವಯಂ ಪ್ರೇರಿತರಾಗಿ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ತೊಡಗುತ್ತಾರೆ. ಮುಂಬರುವ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ೫೫ ವಾರ್ಡ್‌ಗಳಲ್ಲಿ ಆಮ್ ಆದ್ಮಿ ಪಕ್ಷವು ಸ್ಪರ್ಧಿಸಲಿದೆ. ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿಯೂ ಸಹ ಸ್ಪರ್ಧೆ ಮಾಡುತ್ತೇವೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಜಿಲ್ಲೆಯಲ್ಲಿಯೂ ಸಹ ಅದು ಮುಂದುವರೆದಿದೆ. ಭ್ರಷ್ಟಾಚಾರದ ವಿರುದ್ಧ ದಾಖಲೆಗಳ ಸಮೇತ ಹೋರಾಟವನ್ನು ಸಹ ಪಕ್ಷವು ಹಮ್ಮಿಕೊಳ್ಳಲಿದೆ ಎಂದು ಅವರು ತಿಳಿಸಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago