ಬಿಸಿ ಬಿಸಿ ಸುದ್ದಿ

ಡಾ.ಛಪ್ಪರಬಂದಿ ಹಾಗೂ ಕರೊನಾ ಸೇನಾನಿಗಳಿಗೆ ಸ್ನೇಹ ಸಮ್ಮಾನ ನಾಳೆ

ಕಲಬುರಗಿ: ಬೆಂಗಳೂರಿನ ವಿಶ್ವ ಮಾನವ ಹಕ್ಕುಗಳ ಸಂರಕ್ಷಣೆ ಆಯೋಗದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಹಿನ್ನೆಲೆಯಲ್ಲಿ ಸಾಹಿತ್ಯ ಪ್ರೇರಕ ಡಾ.ಶರಣರಾಜ್ ಛಪ್ಪರಬಂದಿ ಅವರಿಗೆ ಕ್ರಿಯಾಶೀಲ ಗೆಳೆಯರ ಬಳಗದ ವತಿಯಿಂದ ‘ಸ್ನೇಹ ಸಮ್ಮಾನ’ ಹಾಗೂ ಮಹಾಮಾರಿ ಕರೊನಾ ಸೋಂಕಿನ ವಿರುದ್ಧ ಹೋರಾಟ ಮಾಡಿದ ಆಪಧ್ಬಾಂದವರಿಗೆ ಆತ್ಮೀಯ ಸನ್ಮಾನ ಕಾರ್ಯಕ್ರಮವನ್ನು ನಾಳೆ (ಸೋಮವಾರ) ಬೆಳಗ್ಗೆ ೧೦.೩೦ಕ್ಕೆ ನಗರದ ಕಲಾ ಮಂಡಳದಲ್ಲಿ ಏರ್ಪಡಿಸಲಾಗಿದೆ ಎಂದು ಬಳಗದ ಸಂಚಾಲಕ ಪ್ರಭುಲಿಂಗ ಮೂಲಗೆ ತಿಳಿಸಿದ್ದಾರೆ.

ತನ್ನ ಕುಟುಂಬದ ಹಿತಾಸಕ್ತಿಗಿಂತ ಸಮಾಜದ ಹಿತವೇ ಮುಖ್ಯವೆಂದು ಬದುಕು ಸಾಗಿಸುತ್ತಿರುವ ಪರೋಪಕಾರಿ ಡಾ.ಶರಣರಾಜ್ ಛಪ್ಪರಬಂದಿ ಅವರ ಸಾಮಾಜಿಕ ಕೊಡುಗೆ ಅಪಾರವಾಗಿದ್ದು, ಕಿಲ್ಲರ್ ಕರೊನಾದ ಹಿನ್ನೆಲೆ ಲಾಕ್ಡೌನ್ ಜಾರಿಗೊಳಿಸಿದ ಸಂದರ್ಭದಲ್ಲೂ ಅನೇಕ ಜನೋಪಯೋಗಿ ಕಾರ್ಯ ಮಾಡಿ ಜನರ ವಿಶೇಷ ಗಮನ ಸೆಳೆದಿದ್ದಾರೆ.

ತಮ್ಮ ಕುಟುಂಬದ ಕಾರ್ಯಗಳನ್ನು ಬದಿಗೊತ್ತಿ ಕಾರ್ಯ ನಿರ್ವಹಿಸುವ ಮೂಲಕ ಜನರ ಮತ್ತು ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ವಿವಿಧ ಕ್ಷೇತ್ರಗಳ ಕರೊನಾ ಸೇನಾನಿಗಳಿಗೆ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ಶ್ರೀನಿವಾಸ ಸರಡಗಿಯ ಶ್ರೀ ರೇವಣಸಿದ್ಧ ಶಿವಾಚಾರ್ಯರವರ ದಿವ್ಯ ಸಾನಿಧ್ಯದಲ್ಲಿ ಜರುಗಲಿರುವ ಕಾರ್ಯಕ್ರಮ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನೀಯರ್ ಜಗನ್ನಾಥ ಹಲಿಂಗೆ ಉದ್ಘಾಟಿಸಲಿದ್ದಾರೆ.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ ಅಧ್ಯಕ್ಷತೆ ವಹಿಸಲಿದ್ದು, ಕಮಲಾಪುರ ತಹಾಸೀಲ್ದಾರ್ ಅಂಜುಮ್ ತಬಸ್ಸುಮ್, ಸಂಶೋಧಕ ಮುಡುಬಿ ಗುಂಡೇರಾವ, ಉದ್ಯಮಿ ಗಗನ ಗಿಲ್ಡಾ ಬಳಗದ ವಿಜಯಕುಮಾರ ತೇಗಲತಿಪ್ಪಿ, ಡಾ.ಬಾಬುರಾವ ಶೇರಿಕಾರ, ರವೀಂದ್ರಕುಮಾರ ಭಂಟನಳ್ಳಿ, ಶರಣಬಸಪ್ಪ ನರೂಣಿ, ಹಣಮಂತರಾಯ ಅಟ್ಟೂರ, ಪ್ರಭವ ಪಟ್ಟಣಕರ್ ಸೇರಿದಂತೆ ಇತರರು ಭಾಗವಹಿಸುವರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago