ಕಲಬುರಗಿ: ಹೋಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಧಗಧಗ ಉರಿದಿರುವ ಘಟನೆ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ರಟಕಲ್ ಗ್ರಾಮದ ನಿವಾಸಿ ಸಂಗಣ್ಣಾ ಬಳವಡಗಿ ಅವರಿಗೆ ಸೇರಿದ ಹೋಟೆಲ್ ಆಗಿದ್ದು, ನಿನ್ನೆ ಗ್ಯಾಸ್ ಸಿಲಿಂಡರ್ ಬಳಸಿ ಅನ್ನ ತಯಾರಿಸುತ್ತಿದ್ದ ವೇಳೆ ಈ ಅವಘಟ ಸಂಭವಿಸಿದೆ ಎನ್ನಲಾಗಿದೆ. ಭಾರಿ ಅನಾಹುತ ತಪ್ಪಿದೆ.
ಘಟನೆಯಲ್ಲಿ ಯಾವುದೇ ಜೀವ ಹಾನಿ ಉಂಟಾಗಿಲ್ಲ. ನಗದು ಸೇರಿದಂತೆ ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತು ಬೆಂಕಿಗೆ ಆಹುತಿಯಾಗಿದೆ ಎಂದು ಅಂದಾಜಿಸಲಾಗಿದೆ.
ಸಂಗಣ್ಣಾ ಆರ್ಥಿಕವಾಗಿ ಹಿಂದುಳಿದಿದ್ದು, ಹೋಟೆಲ್ ನಲ್ಲಿ ಸಣ್ಣ ಪುಟ ವ್ಯವಹಾರ ನಡೆಸಿ ಬದುಕು ನಡೆಸುತ್ತಿದ್ದ, ಘಟನೆಯಿಂದ ಕುಟುಂಬ ಬೀದಿಗೆ ಬಂದಿದೆ. ಸರಕಾರ ಜಿಲ್ಲಾಡಳಿತ ನೆರವಿಗೆ ಧಾವಿಸಬೇಕೆಂದು ಸಿಪಿಐಎಂ ಮುಖಂಡ ಶರಣಬಸಪ್ಪ ಮಮಶೇಟ್ಟಿ ಆಗ್ರಹಿಸಿದ್ದಾರೆ.
ರಟಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…