ಬಿಸಿ ಬಿಸಿ ಸುದ್ದಿ

ವಿಕೆಂಡ್ ಕಪ್ರ್ಯೂ: ಗಡಿನಾಡಿನಲ್ಲಿ ಭಯ ಭೀತಿ ಶುರು

ಆಳಂದ: ಕೋವಿಡ್ ಮೂರನೇ ಅಲೆ ಮುಂಜಾಗೃತವಾಗಿ ರಾಜ್ಯ ಸರ್ಕಾರ ಪ್ರಕಟಿಸಿದ ವಿಕೆಂಡ್ ಕಪ್ರ್ಯೂ ಜಾರಿಯಿಂದ ಗಡಿನಾಡಿನ ಜನರಲ್ಲಿ ಭೀತಿ ಆವರಿಸಿಕೊಂಡಿದೆ.

ರಾಜ್ಯ ಸರ್ಕಾರ ಶುಕ್ರವಾರ ರಾತ್ರಿ 9:00ಗಂಟೆಯಿಂದ ಸೋಮವಾರದ ಬೆಳಗಿನ 5:00ಗಂಟೆಯವರೆಗೆ ಕಪ್ರ್ಯೂ ಜಾರಿಯಿರಗೊಳಿಸಿದ್ದು, ಶನಿವಾರ ಮತ್ತು ರವಿವಾರ ಬೆಳಗಿನ 10:ರಿಂದ2:00 ಗಂಟೆಯವರೆಗೆ ಮಾತ್ರ ವ್ಯಾಪಾರ ವೈಹಿವಾಟಿಗೆ ಅವಕಾಶ ನೀಡಿದೆ. ಆದರೆ ಈ ಆದೇಶ ಇನ್ನೂ ತಾಲೂಕು ಆಡಳಿತಕ್ಕೆ ಶುಕ್ರವಾರ ಸಂಜೆಯವರೆಗೂ ಯಾವುದೇ ಅಧಿಕೃತ ಆದೇಶ ಬಂದಿರಿಲ್ಲ ಎಂಬುದು ವರದಿಯಾಗಿದೆ.

ಗಡಿ ಸರಹದಿನಲ್ಲಿ ಈಗಾಗಲೇ ಆರ್‍ಟಿಪಿಸಿಆರ್ ನೆಗೆÀಟಿವು ವರದಿ ಇಲ್ಲದೆ ಬರುವ ಪ್ರಯಾಣಿಕರ ಸ್ವ್ಯಾಬ್ ಸಂಗ್ರಹಕ್ಕೆ ಮುಂದಾಗಿದ್ದು, ಸದ್ಯ ಹೊರಗಿನಿಂದ ಬರುವವರಿಗೆ ನೆಗೆಟಿವು ವರದಿ ಇಲ್ಲದಿದ್ದರೆ ಪ್ರವೇಶ ನಿರಾಕರಿಸಲಾಗಿದೆ. ಆದರೆ ಈ ನಡುವೆ ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ತಮ್ಮ ಗಡಿಗಳಲ್ಲೇ ವಾಹನಗಳಿಂದ ಇಳಿದು ಅನ್ಯೂ ಮಾರ್ಗದಿಂದ ಗಡಿಗಳನ್ನು ಪ್ರವೇಶಿಸಿ ಹೋಗಿ ಬರುವ ದೃಶ್ಯವೂ ಗುರುವಾರ ಸ್ವತಃ ಜಿಲ್ಲಾಧಿಕಾರಿ ಡಾ| ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ ಅವರೇ ಕಂಡು, ಜನರು ಇಂಥ ಕೆಲಸಕ್ಕ ಮುಂದಾಗದೆ ವೈರಸ್ ಹರಡದಂತೆ ನೋಡಿಕೊಳ್ಳಲು ಸಹಕರಿಸಬೇಕು ಎಂದು ನಿನ್ನೆಯಷ್ಟೇ ಹೇಳಿಹೋಗಿದ್ದಾರೆ.

ಆದಾಗಿಯೂ ಕೋವಿಡ್ ಮೂರನೇ ಅಲೆಯನ್ನು ಮುಂಜಾಗೃತ ಕ್ರಮವಾಗಿ ಶುಕ್ರವಾರದಿಂದ ಸೋಮವಾರದ ವರೆಗೆ ಸಂಜೆ ವಿಧಿಸಲಾದ ವಿಕೆಂಡ ಕಪ್ರ್ಯೂ ಎಸ್ಟರ ಮಟ್ಟಿಗೆ ಯಶಕಾಣುತ್ತದೆ ಎಂಬುದು ಕಾದುನೋಡುವಂತೆ ಮಾಡಿದೆ.
ಗಡಿ ಸರಹದಿನಲ್ಲಿ ಸುಮಾರು ದಿನಗಳಿಂದ ಕೋವಿಡ್ ತಪಾಸಣೆಗೆಂದು ಸ್ಥಾಪಿಸಿದ ಚೆಕ್‍ಪೋಸ್ಟ್‍ನಿಂದಾಗಿ ಜನ ಸಾಮಾನ್ಯರು ಪ್ರವೇಶ ದೊರೆಯದೆ ಸಂಕಷ್ಟವನ್ನು ಅನುಭವಿಸತೊಡಗಿದ್ದಾರೆ.

ನರೆಯ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ತಪಾಸಣೆ ತೀವ್ರಗೊಳಿಸಲಾಗಿದೆ. ಮಹಾರಾಷ್ಟ್ರ ಸಾರಿಗೆ ಬಸ್ ಸೇರಿ ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಖಾಸಗಿ ವಾಹನಗಳ ಮೇಲೆ ಕಟ್ಟೇಚ್ಚರ ವಹಿಸಲಾಗಿದೆ.

ಮತ್ತೊಂದಡೆ ಜಿಲ್ಲೆಯಲ್ಲಿ ಹಾಗೂ ತಾಲೂಕಿನಲ್ಲಿ ತೀರಾ ಕಡಿಮೆಯಾಗಿದ್ದ ಸೋಂಕಿನ ಪ್ರಮಾಣ ಹೆಚ್ಚುವ ಭೀತಿ ಎದುರಾಗಿದ್ದು, ಆದರೆ ಜನರು ಮಾತ್ರ ಇದಕ್ಕೆ ಕ್ಯಾರೆ ಎನ್ನುವ ರೀತಿಯಲ್ಲಿ ಮೈಮರೆತು ವ್ಯವಹರಿಸತೊಡಗಿದ್ದಾರೆ. ಸಂಬಂಧಿತ ಅಧಿಕಾರಿಗಳ ಹತಾಶಯದಿಂದ ಕುಳಿತುಕೊಳ್ಳೂವಂತೆ ಮಾಡಿದೆ.

ಕೋವಿಡ್ ರೂಪಾಂತರ ಡೆಲ್ಟಾ ವೈರಸ್ ಪ್ರಮಾಣ ಈ ಭಾಗದಲ್ಲಿ ಅಧಿಕೃತವಾಗಿ ಪತ್ತೆಯಾಗಿಲ್ಲ. ಆದರೂ ಸಾರ್ವಜನಿಕ ವಲಯದಲ್ಲಿ ಭೀತಿ ಎದುರಿಸುವಂತಾಗಿದೆ.
ಆದೇಶಕ್ಕೆ ಕಾಯಲಾಗಿದೆ: ವಿಕೆಂಡ ಕಪ್ರ್ಯೂ ಕುರಿತು ಇನ್ನೂ ಮೇಲಿನಿಂದ ಆದೇಶ ಬಂದಿಲ್ಲ.

ಬಂದ ತಕ್ಷಣ ಸಾರ್ವಜನಿಕವಾಗಿ ಮಾಹಿತಿ ನೀಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸದ್ಯ ಗಡಿ ಸರಹದಿನಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ಆರ್‍ಟಿಪಿಸಿಆರ್ ವರದಿ ಇದ್ದವರಿಗೆ ಮಾತ್ರ ಹೊರರಾಜ್ಯದಿಂದ ಬರುವವರಿಗೆ ಪ್ರವೇಶ ನೀಡಲಾಗುತ್ತಿದೆ ಎಂದು ತಹಸೀಲ್ದಾರ ಯಲ್ಲಪ್ಪ ಸುಬೇದಾರ ಅವರು ಹೇಳಿದರು.

ಚಿಕಿತ್ಸೆಗೆ ಸಕ್ಕಲ ಸಿದ್ಧತೆ: ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಕ್ಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ| ಚಂದ್ರಕಾಂತ ನರಿಬೋಳ ಅವರು ಸ್ಪಷ್ಟಪಡಿಸಿದ್ದಾರೆ.

ಈ ಹಿಂದಿನ ಅಲೆಯಲ್ಲಿ ಆಸ್ಪತ್ರೆಯಲ್ಲಿ ಆಕ್ಸಿನ್ ಮತ್ತು ತಜ್ಞ ವೈದ್ಯರ ಕೊರತೆ ಇತ್ತು. ಆದರೆ ಈಗ ಚಿಕಿತ್ಸೆಗಾಗಿ ಎಲ್ಲವನ್ನು ಸಜ್ಜಗೊಳಿಸಲಾಗಿದೆ. ಅಲ್ಲದದೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಆಗಬಾರದು ಎಂದು ಘಟಕವನ್ನು ಸ್ಥಾಪನೆಯಾಗಿದ್ದು, ಕಾಮಗಾರಿ ಪೂರ್ಣಹಂತಕ್ಕೆ ತಲುಪಿದ್ದು, ಶೀಘ್ರವೇ ಕಾರ್ಯಾರಂಭಿಸುವದರಿಂದ ಯಾವುದೇ ತೊಂದರೆ ಆಗದು ಎಂದು ಅವರು ಹೇಳಿದರು. ವಯಸ್ಕರರಿಗೆ 20 ಹಾಸಿಗೆ ಮತ್ತು ಮಕ್ಕಳ ಚಿಕಿತ್ಸೆಗಾಗಿ 10 ಹಾಸಿಗೆಯನ್ನು ಸಜ್ಜಾಗಿವೆ. ತಜ್ಞ ವೈದ್ಯರಿದ್ದಾರೆ ಎಂದರು.

ಕೋವಿಡ್ ಮೂರನೇ ಅಲೆಯನ್ನು ಕೇವಲ ಮಕ್ಕಳಿಗೆ ಹರಡುತ್ತದೆ ಎಂಬುದು ತಳ್ಳಿಹಾಕಿದ ಅವರು ಇದು ವಯಸ್ಸಿನ ಮಿತಿಯಿಲ್ಲದೆ ಎಲ್ಲ ವಯಸ್ಕರರಿಗೂ ಹರಡುವ ಸಾಧ್ಯತೆ ಇದೆ. ಮುಂಜಾಗೃತವಾಗಿ ಕೋವಿಡ್ ಲಸಿಕೆಯನ್ನು ಪಡೆಯುವುದು ಹಾಗೂ ದೈಹಿಕ ಅಂತರ, ಮಾಸ್ಕ್ ಧರಿಸಿ ವ್ಯವಹಾರಿಸಿದರೆ ಮಾತ್ರ ಸೋಂಕು ತಡೆಯಲು ಸಾಧ್ಯವಿದೆ ಎಂದು ಅವರು ಹೇಳಿದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

29 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

37 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago