ಕಾಂಗ್ರೆಸ್ ಪಕ್ಷಕ್ಕೆ ದೇಶದ ಸುರಕ್ಷತೆಯ ಕಾಳಜಿ ಇಲ್ಲ: ಯಳಸಂಗಿ

0
9

ಆಳಂದ: ಭಯೋತ್ಪಾದಕರ ವಿರುದ್ಧ ಸಂಸತ್ತಿನಲ್ಲಿ ಮಸೂದೆ ತಂದಾಗ, ಕಾಂಗ್ರೆಸ್ ಸಂಸದರು ಸದನದಿಂದ ಹೊರನಡೆದಿರುವುದು ದೇಶದ ಸುರಕ್ಷತೆ ವಿಚಾರದಲ್ಲಿ ಆ ಪಕ್ಷಕ್ಕಿರುವ ನಿಷ್ಕಾಳಜಿಯೇ ಸಾಕ್ಷಿ. ಕಾಂಗ್ರೆಸ್ ಮುಖವಾಡ ಈ ಮೂಲಕ ಮತ್ತೊಮ್ಮೆ ಕಳಚಿ ಬಿದ್ದಿದೆ ಎಂದು ನಿಂಬರ್ಗಾ ಬಿಜೆಪಿ ಮುಖಂಡ ಬಸವರಾಜ ಯಳಸಂಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಕೆಂದ್ರದಲ್ಲಿ ಆಡಳಿತದಲ್ಲಿದ್ದಾಗ ಹಿಂದೂಗಳ ವಿರುದ್ಧ ಮಸೂದೆ ತರುತ್ತಿತ್ತು. ಆದರೆ, ಈಗ ದೇಶ ವಿರೋಧಿಗಳನ್ನು ಪತ್ತೆ ಹಚ್ಚಲು ಪೂರಕ ಮಸೂದೆ ತಂದಾಗ ಅದನ್ನು ಬೆಂಬಲಿಸದೆ ಸದನದ ಕಲಾಪ ಬಹಿಷ್ಕರಿಸುವುದು ಕಾಂಗ್ರೆಸ್ ಭಯೋತ್ಪಾದಕರ ಪರ ನೀತಿ ತೋರಿಸುವಂತಿದೆ ಎಂದು ಹೇಳಿದರು.

Contact Your\'s Advertisement; 9902492681

ಭಯೋತ್ಪಾದಕರಿಗೆ ಹಣ ನೀಡುವವರನ್ನು ಮತ್ತು ಜಿಹಾದಿ ಸಾಹಿತ್ಯ ಒದಗಿಸಿ ಕೊಡುವವರನ್ನು ಭಯೋತ್ಪಾದಕರೆಂದು ಪರಿಗಣಿಸುವ ಮಸೂದೆಯನ್ನು ಬಿಜೆಪಿ ನೇತೃತ್ವದ ಕೆಂದ್ರ ಸರ್ಕಾರ ಅಂಗೀಕರಿಸಿದೆ. ಇದಕ್ಕಾಗಿ ಪ್ರಧಾನಿ ನರೆಂದ್ರ ಮೋದಿ ಮತ್ತು ಕೆಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here