ಆಳಂದ: ಆ ೧೫ ೭೫ನೇ ಸ್ವತಂತ್ರ ದಿನಾಚರಣೆಯನ್ನು ಕೋವಿಡ-೧೯ರ ಹಿನ್ನಲೆಯಲ್ಲಿ ಸರಳ ರೀತಿಯಲ್ಲಿ ತಮ್ಮ ತಮ್ಮ ಕಚೇರಿ ಹಂತಗಳಲ್ಲಿ ಆಚರಿಸಲು ಗ್ರೇಡ-೨ ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ ಅವರು ಸೂಚಿಸಿದರು.
ಶುಕ್ರವಾರ ಪಟ್ಟಣದ ತಹಶೀಲ ಕಚೇರಿಯಲ್ಲಿ ಸ್ವತಂತ್ರ ದಿನಾಚರಣೆ ಆಚರಣೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಅಂದು ಬೆಳಗ್ಗೆ ೭ ಗಂಟೆಗೆ ತಮ್ಮ ತಮ್ಮ ಕಚೇರಿಗಳಲ್ಲಿ ರಾಷ್ಟ್ರ ಧ್ವಜ ನೇರವೇರಿಸಿ ೮ ಗಂಟೆಗೆ ಎಲ್ಲಾ ಅಧಿಕಾರಿಗಳು ತಹಶೀಲ ಕಚೇರಿಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಶ್ರೀ ರಾಮ ಮಾರ್ಕೇಟ ಆವರಣದಲ್ಲಿ ನಡೆಯುವ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ತಪ್ಪದೇ ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಮತ್ತು ಯಾವುದೇ ತರಹದ ಸಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಭರತರಾಜ ಸಾವಳಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬೇಬಿನಂದಾ, ಅರಣ್ಯ ಇಲಾಖೆಯ ವೀರೇಂದ್ರ, ಕೈಗಾರಿಕ ಅಧಿಕಾರಿ ಜಾಫರ ಖಾಸಿಂ ಅನ್ಸಾರಿ, ಆರೋಗ್ಯ ಇಲಾಖೆಯ ವಿಜಯಲಕ್ಷ್ಮೀ, ಲೋಕೋಪಯೋಗಿಯ ಇಲಾಖೆಯ ಶಿವಯ್ಯ ಗಣಾಚಾರಿ ಹಾಗೂ ಬಸವರಾಜ ಕಾಬಾ, ಆಕಾಶ ಸಜ್ಜನ, ಆನಂದ ಪೂಜಾರಿ ಸಭೆಯಲ್ಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತ ಇದ್ದರೇ ತಾಲ್ಲೂಕಿನ ಒಟ್ಟು ೨೮ ಇಲಾಖೆಗಳು ಇದ್ದು ಇದರಲ್ಲಿ ಅರ್ಧ ಭಾಗದಷ್ಟು ಅಧಿಕಾರಿಗಳು ಸಭೆಗೆ ಗೈರು ಆಗಿದ್ದು ಎದ್ದು ಕಾಣುತ್ತಿತ್ತು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…