ತ್ಯಾಗ, ಬಲಿದಾನದಿಂದ ಕಟ್ಟಿದ ಪಕ್ಷ ಕಾಂಗ್ರೆಸ್ ಪಕ್ಷ: ಡಾ.ರಶೀದ್

0
144

ಶಹಾಬಾದ: ಕಾಂಗ್ರೆಸ್ ಪಕ್ಷವು ತ್ಯಾಗ, ಬಲಿದಾನದ ಮೂಲಕ ಕಟ್ಟಿದಂತಹ ಪಕ್ಷವಾಗಿದೆ.ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಕಾಂಗ್ರೆಸ್ ಮಹನೀಯರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ದಾರೆ ಎಂದು ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಹೇಳಿದರು.
ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಖ ಕಾಂಗ್ರೆಸ್ಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ.ಆಯಾ ಕಾಲಕ್ಕೆ ತಕ್ಕ ಬೇಡಿಕೆಯಂತೆ ಹೋರಾಟಗಳನ್ನು ಮಾಡಿ ರಾಜಕೀಯ ತ್ತು ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ.ಇದು ಕೆಲವೇ ಜನರ ಪಕ್ಷವಲ್ಲ. ಇದೊಂದು ದೇಶದ ಜನರೇ ನಡೆಸುತ್ತಿರುವ ಪಕ್ಷವಾಗಿz.ಎಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಕಾರ್ಯಕರ್ತರನ್ನು ಹುರಿದುಂಬಿಸಿ ಆಡಳಿತ ಪಕ್ಷದ ವೈಫಲ್ಯಗಳನ್ನು ಜನರಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಆಡಳಿತ ಚುಕ್ಕಾಣಿ ಹಿಡಿಯುವಂತೆ ಶ್ರಮಿಸಬೇಕಾಗಿದೆ ಎಂದರು.

Contact Your\'s Advertisement; 9902492681

ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ ಚವ್ಹಾಣ ಮಾತನಾಡಿ, ಬ್ರಿಟಿಷರಿಂದ ದೇಶವನ್ನು ಮುಕ್ತ ಮಾಡುವಾಗಲೂ ನಮ್ಮ ನಾಯಕರು ತಮ್ಮ ಜೀವನವನ್ನೇ ಬಲಿದಾನ ಮಾಡಿದ್ದಾರೆ.ಬಿಜೆಪಿಯವರು ನಮ್ಮ ದೇಶ, ನಾವು ಹಿಂದೂ ಎನ್ನುವ ಹೆಸರಿನಲ್ಲಿ ರಾಜಕೀಯ ಮಾಡಿ ಜನರಲ್ಲಿರುವ ಒಗ್ಗಟ್ಟು ಒಡೆಯುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಲೇ ಬರುತ್ತಿದ್ದಾರೆ ಎಂದು ಹೇಳಿದರು.

ಮುಖಂಡರಾದ ಹಾಷಮಖಾನ,ಸೂರ್ಯಕಾಂತ ಕೋಬಾಳ,ತಿಪ್ಪಣ್ಣ ನಾಟೇಕಾರ,ಡಾ.ಅಹ್ಮದ್ ಪಟೇಲ್,ಶರಣು ಪಗಲಾಪೂರ,ಫಜಲ್ ಪಟೇಲ್, ಶಿವಕುಮಾರ ನಾಟೇಕಾರ,ಹರೀಶ ಕರಣಿಕ್, ನಾಗಣ್ಣ ರಾಂಪೂರೆ, ಇಮ್ರಾನ್, ಜಾವೀದ್,ಇಮ್ಯಾನುವೆಲ್ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here