ತ್ಯಾಗ, ಬಲಿದಾನದಿಂದ ಕಟ್ಟಿದ ಪಕ್ಷ ಕಾಂಗ್ರೆಸ್ ಪಕ್ಷ: ಡಾ.ರಶೀದ್

ಶಹಾಬಾದ: ಕಾಂಗ್ರೆಸ್ ಪಕ್ಷವು ತ್ಯಾಗ, ಬಲಿದಾನದ ಮೂಲಕ ಕಟ್ಟಿದಂತಹ ಪಕ್ಷವಾಗಿದೆ.ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಕಾಂಗ್ರೆಸ್ ಮಹನೀಯರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ದಾರೆ ಎಂದು ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಹೇಳಿದರು.
ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಖ ಕಾಂಗ್ರೆಸ್ಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ.ಆಯಾ ಕಾಲಕ್ಕೆ ತಕ್ಕ ಬೇಡಿಕೆಯಂತೆ ಹೋರಾಟಗಳನ್ನು ಮಾಡಿ ರಾಜಕೀಯ ತ್ತು ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ.ಇದು ಕೆಲವೇ ಜನರ ಪಕ್ಷವಲ್ಲ. ಇದೊಂದು ದೇಶದ ಜನರೇ ನಡೆಸುತ್ತಿರುವ ಪಕ್ಷವಾಗಿz.ಎಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಕಾರ್ಯಕರ್ತರನ್ನು ಹುರಿದುಂಬಿಸಿ ಆಡಳಿತ ಪಕ್ಷದ ವೈಫಲ್ಯಗಳನ್ನು ಜನರಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಆಡಳಿತ ಚುಕ್ಕಾಣಿ ಹಿಡಿಯುವಂತೆ ಶ್ರಮಿಸಬೇಕಾಗಿದೆ ಎಂದರು.

ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ ಚವ್ಹಾಣ ಮಾತನಾಡಿ, ಬ್ರಿಟಿಷರಿಂದ ದೇಶವನ್ನು ಮುಕ್ತ ಮಾಡುವಾಗಲೂ ನಮ್ಮ ನಾಯಕರು ತಮ್ಮ ಜೀವನವನ್ನೇ ಬಲಿದಾನ ಮಾಡಿದ್ದಾರೆ.ಬಿಜೆಪಿಯವರು ನಮ್ಮ ದೇಶ, ನಾವು ಹಿಂದೂ ಎನ್ನುವ ಹೆಸರಿನಲ್ಲಿ ರಾಜಕೀಯ ಮಾಡಿ ಜನರಲ್ಲಿರುವ ಒಗ್ಗಟ್ಟು ಒಡೆಯುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಲೇ ಬರುತ್ತಿದ್ದಾರೆ ಎಂದು ಹೇಳಿದರು.

ಮುಖಂಡರಾದ ಹಾಷಮಖಾನ,ಸೂರ್ಯಕಾಂತ ಕೋಬಾಳ,ತಿಪ್ಪಣ್ಣ ನಾಟೇಕಾರ,ಡಾ.ಅಹ್ಮದ್ ಪಟೇಲ್,ಶರಣು ಪಗಲಾಪೂರ,ಫಜಲ್ ಪಟೇಲ್, ಶಿವಕುಮಾರ ನಾಟೇಕಾರ,ಹರೀಶ ಕರಣಿಕ್, ನಾಗಣ್ಣ ರಾಂಪೂರೆ, ಇಮ್ರಾನ್, ಜಾವೀದ್,ಇಮ್ಯಾನುವೆಲ್ ಇತರರು ಇದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

8 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420