ಕಿಟ್ ನೀಡಲು ನೊಂದಾಯಿತ ಕಟ್ಟಡ ಕಾರ್ಮಿಕರು ತಹಸೀಲ್ ಬಳಿ ಧರಣಿ

ಸುರಪುರ: ನೊಂದಾಯಿತ ಕಟ್ಟಡ ಕಾರ್ಮಿಕರು ಗುರುವಾರ ಮುಂಜಾನೆ ನಗರದ ತಹಸೀಲ್ ಕಚೇರಿ ಮುಂದೆ ಧರಣಿ ನಡೆಸಿ ತಮಗೆ ದಿನಸಿ ಕಿಟ್‍ಗಳನ್ನು ನೀಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಭಾಗವಹಿಸಿದ್ದ ಅನೇಕ ಜನ ಕಾರ್ಮಿಕರು ಮಾತನಾಡಿ,ನಮಗೆ ಕಿಟ್ ಕೊಡುತ್ತೇವೆ 12ನೇ ತಾರೀಖು ಬನ್ನಿ ಎಂದಿದ್ದರು.ಅದರಂತೆ ನಾವು ಬೆಳಿಗ್ಗೆಯೆ ಬಂದು ಶ್ರೀ ಮಹರ್ಷಿ ವಾಲ್ಮೀಕಿ ಭವನದ ಬಳಿಯಲ್ಲಿ ಸಾಲಲ್ಲಿ ನಿಂತಿದ್ದೇವು,ಒಂದು ಗಂಟೆ ಆದ ನಂತರ ಎಲ್ಲಾ ಕಿಟ್‍ಗಳು ಖಾಲಿಯಾಗಿವೆ ಎಂದು ಹೇಳುತ್ತಿದ್ದಾರೆ.ಆದರೆ ಬನ್ನಿ ಎಂದು ಹೇಳಿದವರು ಈಗ ಕಿಟ್ ಖಾಲಿಯಾಗಿವೆ ಎನ್ನುತ್ತಿದ್ದಾರೆ.ಇದು ಹೇಗೆ ಸಾಧ್ಯ ಎಂದರಲ್ಲದೆ ಯಾರ್ಯಾರಿಗೋ ಬೇಕಾದಷ್ಟು ಕಿಟ್‍ಗಳನ್ನು ಕೊಟ್ಟಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.

ನಂತರ ಧರಣಿ ಸ್ಥಳಕ್ಕೆ ತಹಸೀಲ್ದಾರ ಸುಬ್ಬಣ್ಣ ಜಮಖಂಡಿ ಆಗಮಿಸಿ ಕಾರ್ಮಿಕರ ಬೇಡಿಕೆಯನ್ನು ಆಲಿಸಿ ಸ್ಥಳಕ್ಕೆ ಕಾರ್ಮಿಕ ಇಲಾಖೆಯ ನಿರೀಕ್ಷಕ ಗಂಗಾಧರ ಅವರನ್ನು ಕರೆಯಿಸಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಕಾರ್ಮಿಕರ ನಿರೀಕ್ಷಕ ಗಂಗಾಧರ ಮಾತನಾಡಿ,ಸುರಪುರ ತಾಲೂಕಿನಲ್ಲಿ 13 ಸಾವಿರ ಜನ ನೊಂದಾಯಿತ ಕಾರ್ಮಿಕರಿದ್ದಾರೆ.ಆದರೆ ಇದುವರೆಗೂ 7938 ಕಿಟ್‍ಗಳು ಬಂದಿದ್ದು ಎಲ್ಲವನ್ನು ವಿತರಿಸಿದ್ದೇವೆ.ಇನ್ನುಳಿದವರಿಗೆ ಕಿಟ್ ಬೇಕೆಂದು ಎಲ್ಲಾ ಕಾರ್ಮಿಕರು ಮನವಿ ಸಲ್ಲಿಸಿದರೆ ಅದನ್ನು ಇಲಾಖೆ ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರಲ್ಲದೆ,ನಂತರದಲ್ಲಿ ಕಿಟ್‍ಗಳು ಬಂದಾಗ ಎಲ್ಲರಿಗೂ ವಿತರಿಸುವುದಾಗಿ ತಿಳಿಸಿದರು.

ಇದೆಲ್ಲವನ್ನು ಆಲಿಸಿದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ,ತಾವೆಲ್ಲರು ಧರಣಿಯನ್ನು ನಿಲ್ಲಿಸಿ ಮನವಿಯನ್ನು ನೀಡಿ ನಿಮ್ಮ ಬೇಡಿಕೆಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರಾದ ದೇವಪ್ಪ ನಗರಗುಂಡ,ತಿಮ್ಮಯ್ಯ ತಳವಾರ ಸೇರಿದಂತೆ ಅನೇಕರಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

4 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

4 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420