ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿಗೆ ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ದುಡಿಮೆ ಬಂಡವಾಳ ಸಾಲ ಒದಗಿಸುವ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ ಪಡೆಯಲು ಉದ್ದೇಶಿಸಿರುವ ಕೈಮಗ್ಗ ನೇಕಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಪ್ರಸಕ್ತ ಸಾಲಿಗೆ ಈ ಯೋಜನೆಯಡಿ ಜಿಲ್ಲೆಯ 10 ಕೈಮಗ್ಗ ನೇಕಾರರಿಗೆ ಬ್ಯಾಂಕ್‍ಗಳಿಂದ ಸಾಲ ಒದಗಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ಶೇ. 6ರ ಬಡ್ಡಿ ದರದಲ್ಲಿ ಕೈಮಗ್ಗ ನೇಕಾರರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳಿಂದ ಸಾಲವನ್ನು ಒದಗಿಸಲಾಗುತ್ತದೆ. ಬ್ಯಾಂಕ್‍ನವರು ವಿಧಿಸುವ ಸಾಲದ ಮೇಲಿನ ಗರಿಷ್ಠ ಬಡ್ಡಿ ದರ ಶೇ. 7 ರಂತೆ ಸಾಲ ಮಂಜೂರಾದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರವು ಬಡ್ಡಿ ಸಹಾಯಧನವಾಗಿ ನೀಡಲಿದೆ.

ಸಾಲದ ಮೊಬಲಗಿನ ಶೇ. 20 ಗರಿಷ್ಠ 10,000 ರೂ. ಗಳನ್ನು ಮಾರ್ಜಿನ್ ಮನಿಯಾಗಿ ಸಾಲದ ಖಾತೆಗೆ ಜಮಾ ಮಾಡಲಾಗುವುದು. ನೇಕಾರರ ಕೈಮಗ್ಗ ನೇಕಾರಿಕೆ ವ್ಯವಹಾರವನ್ನು ಆಧರಿಸಿ ಈ ಯೋಜನೆಯಡಿ ಗರಿಷ್ಠ 5,00,000 ರೂ.ಗಳ ಸಾಲವನ್ನು ಒದಗಿಸಲಾಗುತ್ತದೆ.

ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಪಡೆಯಲು ಉದ್ದೇಶಿಸಿರುವ ಕೈಮಗ್ಗ ನೇಕಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಕಲಬುರಗಿ, ಗುರು ಬಸವ ಕಟ್ಟಡ, ಮನೆ ನಂ.2-910, ಓಕಳಿ ಕ್ಯಾಂಪ್, ಸೌಭಾಗ್ಯ ಕಲ್ಯಾಣ ಮಂಟಪ ಹತ್ತಿರ, ಸೇಡಂ ರಸ್ತೆ, ಕಲಬುರಗಿ-585102 ಕಚೇರಿಗೆ 2021ರ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08472-278629 ಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420