ಬಿಸಿ ಬಿಸಿ ಸುದ್ದಿ

ಟೈಲರ್ ಕಾರ್ಮಿಕರಿಗೆ ಕೋವಿಡ್ ಕಿಟ್ ವಿತರಣೆ

ಸುರಪುರ:ನಗರದ ರಂಗಂಪೇಟೆಯ ಅಂಬಾಭವಾನಿ ದೇವಸ್ಥಾನದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಯಾದಗಿರಿ ,ಕರ್ನಾಟಕ ರಾಜ್ಯ ಅಸಂಘಟಿತ ಟೈಲರ್ ಕಾರ್ಮಿಕ ಕಲ್ಯಾಣ ಮಂಡಳಿ ಬೆಂಗಳೂರು ಇವರ ಸಹಯೋಗದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ರಂಗಂಪೇಟೆಯ ನೊಂದಾಯಿತ ಅಸಂಘಟಿತ ಟೈಲರ್ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕ ಗಂಗಾಧರ ಮಾತನಾಡಿ,ಅಸಂಘಟಿತ ಕಾರ್ಮಿಕರು ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾಗಿದ್ದಾರೆ ಎಂದು ಸರಕಾರ ಅವರ ನೆರವಿಗೆ ಆಗಮಿಸಿದ್ದು,ಅದರಂತೆ ಟೈಲರ್ ಕೆಲಸ ಮಾಡುವವರು ತೊಂದರೆಗೊಳಗಾಗಿದ್ದನ್ನು ಮನಗಂಡು ಕಿಟ್‍ಗಳನ್ನು ನೀಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷರಾದ ಗಂಗಾಧರ ಅವರಿಗೆ ಹಾಗು ವೈದ್ಯಾಧಿಕಾರಿ ಓಂಪ್ರಕಾಶ ಅಂಬುರೆ,ತಹಸೀಲ್ ಸಿರಸ್ಥೇದಾರ ಸುನಿಲ್ ಪುಲ್ಸೆ,ವೆಂಕಟೇಶ,ಯಾದಗಿರಿ ಕಾರ್ಮಿಕ ಇಲಾಖೆಯ ಸಂತೋಷಕುಮಾರ್,ದೀಪಕಸಿಂಗ್ ಹಾಗು ಸುರಪುರ ಕಾರ್ಮಿಕ ಬಂಧುಗಳಾದ ಬಸವರಾಜ ಪೂಜಾರಿ,ರಾಜು ಕಲಾಲ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ನಂತರ ಎಲ್ಲಾ ನೊಂದಾಯಿತ ಟೈಲರ್ ಕಾರ್ಮಿಕರಿಗೆ ಕಿಟ್‍ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ರಾಜು ಪುಲ್ಸೆ,ಭೂಮದೇವ ಮಹೇಂದ್ರಕರ್,ಗೋಪಾಲ ಬಾಸುತ್ಕರ್,ಭೀಮು ಪತಂಗೆ,ಮುರಳಿ ಅಂಬುರೆ,ಸತೀಶ ಬಾಸುತ್ಕರ್,ಸಂತೋಷ ಬಾಸುತ್ಕರ್,ಸಂತೋಷ ಮಹಿಂದ್ರಕರ್,ವಿಜಯ ಪುಲ್ಸೆ,ಅಂಬಾದಾಸ ಮಹೇಂದ್ರಕರ್,ಅಭಿಷೇಕ್ ಪತಂಗೆ,ಸುಮಿತ್ ಮಹೇಂದ್ರಕರ್,ಹಿತೇಶ ಗವಳ್ಕರ್,ಪವನ ಮಾಳದ್ಕರ್ ಇತರರಿದ್ದರು.

emedialine

Recent Posts

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

14 mins ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

24 mins ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

27 mins ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

2 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

2 hours ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

2 hours ago