ಬಿಸಿ ಬಿಸಿ ಸುದ್ದಿ

ಮೊಹರಂ, ಗಣೇಶ ಚತುರ್ಥಿ ಹಬ್ಬಗಳನ್ನು ಸರಳವಾಗಿ ಆಚರಿಸಲು ಡಿಸಿ ಸೂಚನೆ

ಕಲಬುರಗಿ: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ 2021ರ ಆಗಸ್ಟ್ ರಿಂದ ಅಕ್ಟೋಬರ್ ಮಾಹೆಯಲ್ಲಿ ಆಚರಿಸಲಾಗುವ ಹಬ್ಬಗಳಾದ ಮೊಹರಂ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದುರ್ಗಾಪೂಜೆ ಮೊದಲಾದ ಹಬ್ಬಗಳನ್ನು ಸರಳವಾಗಿ, ಭಕ್ತಿ ಪೂರ್ವಕವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.
ಈ ಮೇಲ್ಕಂಡ ಹಬ್ಬಗಳನ್ನು ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯನ್ವಯ ಕಲಬುರಗಿ ಜಿಲ್ಲೆಯಾದ್ಯಂತ ಆಚರಿಸಬೇಕು. ಮಾರ್ಗಸೂಚಿ ವಿವರ ಇಂತಿದೆ. ಸಾಮಾಜಿಕ, ರಾಜಕೀಯ, ಕ್ರೀಡಾ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಕಾರ್ಯಕ್ರಮ ಹಾಗೂ ಇತರೆ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್ ಸಭೆ–ಸಮಾರಂಭಗಳನ್ನು ನಿμÉೀಧಿಸಲಾಗಿದೆ.

ಪೂಜಾ ಸ್ಥಳಗಳು (ದೇವಸ್ಥಾನ, ಮಸೀದಿಗಳು, ಚರ್ಚ್‍ಗಳು ಗುರುದ್ವಾರಗಳು ಇತರೆ ಧಾರ್ಮಿಕ ಸ್ಥಳಗಳು) ತೆರೆಯಲು ಮತ್ತು ಕೋವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ಪೂಜಾ ಕಾರ್ಯಗಳನ್ನು ಕೈಗೊಳ್ಳಲು ಅನುಮತಿ ನೀಡಿದ್ದು, ಆದರೆ ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ ಸಮಾರಂಭಗಳಿಗೆ ಅನುಮತಿ ಇರುವುದಿಲ್ಲ.

ಮೊಹರಂ ಹಬ್ಬ ಆಚರಿಸುವ ಸಂದರ್ಭದಲ್ಲಿ ಪಾಲಿಸಬೇಕಾದ ಮಾರ್ಗಸೂಚಿ ವಿವರ ಇಂತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳನ್ನು/ ಪಂಜಾವನ್ನು ಸ್ಥಾಪಿಸುವುದನ್ನು ಹಾಗೂ ತಾಜಿಯಾವನ್ನು ನಿರ್ಭಂಧಿಸಲಾಗಿದ್ದು, 2021ರ ಆಗಸ್ಟ್ 12 ರಿಂದ ಆಗಸ್ಟ್ 20 ರವರೆಗೆ ಕಲಬುರಗಿ ಜಿಲ್ಲೆಯಲ್ಲಿ ಮೊಹರಂ ಪ್ರಾರ್ಥನೆ ಹಾಗೂ ಮೆರವಣಿಗೆಯನ್ನು ನಿμÉೀಧಿಸಲಾಗಿದ್ದು, ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪಂಜಾ, ಆಲಂ ಮತ್ತು ತಾಜಿಯತ್‍ಗಳನ್ನು ಸಾರ್ವಜನಕರು ಮುಟ್ಟದೆ ದೂರದಿಂದ ನೋಡಬೇಕು.

ಖಬರಸ್ಥಾನ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಭಂದಿಸಲಾಗಿದ್ದು, ಖಬರಸ್ತಾನಗಳಿಗೆ ಕೇವಲ ದಫನ್ ಮಾಡಲು ಮಾತ್ರ ಅನುಮತಿ ನೀಡಿದ್ದು, ಮೊಹರಂ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ. 60 ವರ್ಷ ಮೇಲ್ಪಟ್ಟ ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು.

ಕೋವಿಡ್-19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಬೇಕು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಬೇಕು. ಕೋವಿಡ್-19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಆಗಾಗ ಕೈಗಳನ್ನು ಸೋಪು ಮತ್ತು ಸ್ಯಾನಿಟೈಸರ್‍ಗಳಿಂದ ಶುಚಿಗೊಳಿಸಬೇಕು. ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಬೇಕು.

ಭಕ್ತಾದಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟುವುದು. ಆಡಳಿತ ಮಂಡಳಿ/ಮುತವಲ್ಲಿ/ ಆಡಳಿತಾಧಿಕಾರಿ ಇವರು ಭಕ್ತಾದಿಗಳು ಕುಳಿತುಕೊಳ್ಳುವ ಗರಿಷ್ಟ ಸಂಖ್ಯೆಯನ್ನು ಮುಖ್ಯದ್ವಾರದ ಬಳಿ ಪ್ರದರ್ಶಿಸುಬೇಕು. ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರಬೇಕು.

ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡತಕ್ಕದ್ದಲ್ಲ. ಮಸೀದಿ ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ ಸಭಾಂಗಣ, ಸಮುದಾಯ ಭವನ, ಶಾದಿಮಹಲ್ ಮತ್ತಿತ್ತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಸುವಂತಿಲ್ಲ. ಭಕ್ತಾದಿಗಳು ಯಾವ ಯಾವ ಕೆಲಸವನ್ನು ನಿರ್ವಹಿಸುವುದು / ಯಾವ ಯಾವ ಕೆಲಸವನ್ನು ನಿರ್ವಹಿಸಬಾರದು ಎಂಬ ಬಗ್ಗೆ ಧ್ವನಿ ವರ್ಧಕದ ಮೂಲಕ ಸೂಚಿಸಬೇಕು.

ಶ್ರೀ ಗಣೇಶ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಪಾಲಿಸಬೇಕಾದ ಮಾರ್ಗಸೂಚಿ ವಿವರ ಇಂತಿದೆ. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸಬೇಕು. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಚಪ್ಪರ/ ಪೆಂಡಾಲ್/ಶಾಮಿಯಾನ್ ವೇದಿಕೆಗಳನನ್ನು ನಿರ್ಮಿಸಿ ಗೌರಿ-ಗಣೇಶ ಮೂತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ/ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಪಾರಂಪರಿಕ ಗೌರಿ–ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ ಜಿಲ್ಲಾಡಳಿತ/ ಹತ್ತಿರದ ಸ್ಥಳೀಯ ಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‍ಗಳಲ್ಲಿ ವಿಸರ್ಜಿಸಬೇಕು.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದು. ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್-19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸು (ಮಾಸ್ಕ) ಧರಿಸಬೇಕು. ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಪೆÇಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ದಿನಾಂಕ: 06-08-2021ರ ಮಾರ್ಗಸೂಚಿಯಂತೆ ಮನೋರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಕಾರ್ಯಕ್ರಮ, ಇತರೆ ಒಗ್ಗೂಡುವಿಕೆಗಳನ್ನು ಹಾಗೂ ಬೃಹತ್ ಸಭೆ–ಸಮಾರಂಭಗಳನ್ನು ನಿμÉೀಧಿಸಲಾಗಿದೆ. ಜಾತ್ರೆಗಳು ಈ ಮೇಲ್ಕಂಡ ಹಬ್ಬಗಳ ಸಂದರ್ಭದಲ್ಲಿ ಯಾವುದೇ ವಿಧವಾದ ಮೆರವಣಿಯನ್ನು ಜನರ ಒಗ್ಗೂಡುವಿಕೆಯನ್ನು ಮಾಡತಕ್ಕದ್ದಲ್ಲ. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ ಜಿಲ್ಲಾಡಳಿತದ ನಿರ್ದೇಶನ ಮಾರ್ಗಸೂಚಿಗಳನ್ನು ಉಲ್ಲಂಘಿಸುವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

57 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago