ನಿವೃತ್ತರಾಗಿ ಸ್ವಗ್ರಾಮಕ್ಕೆ ಮರಳಿದ ಯೋಧರಿಗೆ ಗ್ರಾಮದಿಂದ ಅದ್ದೂರಿ ಸ್ವಾಗತ

ಶಹಾಬಾದ: ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧರಿಗೆ ಗ್ರಾಮದಿಂದ ಅದ್ದೂರಿಯಾಗಿ ಸ್ವಾಗತ ಮಾಡಿ ತಮ್ಮೂರಿನ ವೀರಯೋಧರಿಗೆ ಬರಮಾಡಿಕೊಂಡರು.

ಕಲಬುರಗಿ ಜಿಲ್ಲೆ ಶಹಬಾದ ತಾಲೂಕಿನ ಮರತೂರು ಗ್ರಾಮದಲ್ಲಿ ಗ್ರಾಮದ ಮೂವರು ಯೋಧರಿಗೆ ಭವ್ಯವಾದ ಸ್ವಾಗತ ಕೋರಲಾಯಿತು. ಸೇನೆ ಹಾಗೂ ಬಿಎಸ್‍ಎಫ್‍ನಲ್ಲಿ ಇಪ್ಪತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಮರತೂರು ಗ್ರಾಮದ ಶರಣಪ್ಪ ದುಗ್ಗೊಂಡ, ಜಗದೀಶ್ ಠಾಕೂರ್ ಮತ್ತು ಶಿವಾನಂದ ಧರ್ಮಾಪುರ ಅವರನ್ನು ಗ್ರಾಮದ ಅಂಬೇಡ್ಕರ್ ವೃತ್ತದಿಂದ ತೆರೆದ ಜೀಪಿನಲ್ಲಿ ಗ್ರಾಮಸ್ಥರು ತ್ರೀವರ್ಣ ಧ್ವಜಗಳೊಂದಿಗೆ ಭವ್ಯ ಮೆರವಣಿಗೆ ಮೂಲಕ, ಇಡೀ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿ, ವಂದೇ ಮಾತಾರಂ, ಭಾರತ್ ಮಾತಾಕೀ ಜೈ ಎಂಬ ಜಯಘೋಷ ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು. ಅಲ್ಲದೆ ಗ್ರಾಮದ ಮಹಿಳೆಯರು ಆರತಿ ಎತ್ತಿ ತಿಲಕವಿಟ್ಟು ಆತ್ಮೀಯವಾಗಿ ತಮ್ಮೂರಿನ ವೀರಯೋಧರನ್ನ ಬರಮಾಡಿಕೊಂಡರು.

ಭಾರತೀಯ ಗಡಿ ಭದ್ರತಾ ಪಡೆ, ಭಾರತೀಯ ಸೇನೆಯಲ್ಲಿ ಜಮ್ಮು ಕಾಶ್ಮೀರ, ಜಾಖಾರ್ಂಡ್, ಗುಜರಾತ್, ಪಂಜಾಬ್ ಗಡಿ ಸೇರಿದಂತೆ ದೇಶದ ಹಲವು ಗಡಿಗಳಲ್ಲಿ ಸೇವೆ ಸಲ್ಲಿಸಿ ಇಪ್ಪತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ದೇಶ ಸೇವೆ ಮಾಡಬೇಕೆಂಬ ಇಚ್ಛೆಯಿಂದ ಒಂದೇ ಗ್ರಾಮದ ಮೂವರು ಯೋಧರು ಸೇನೆಗೆ ಸೇರಿದ್ದರು.

ಇದೀಗ ಸುದೀರ್ಘ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ್ದಾಗ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದ್ದನ್ನು ಕಂಡು ಸೈನಿಕರು ಭಾವುಕರಾದರು.ರಾಜಕಾರಣಿಗಳಿಗೆ ಅದ್ದೂರಿ ಮೆರವಣಿಗೆ ಸನ್ಮಾನ ಮಾಡುವ ಜನರ ಮಧ್ಯೆ, ಮರತೂರು ಗ್ರಾಮಸ್ಥರು ದೇಶ ಸೇವೆ ಮಾಡಿ ಬಂದ ವೀರಯೋಧರಿಗೆ ಭರ್ಜರಿ ಸ್ವಾಗತ ಕೋರಿದ್ದು ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ ಮಾತನಾಡಿ, ದೇಶದ ಜನರ ರಕ್ಷ ಣೆಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಗಡಿ ಕಾಯುವ ಯೋಧರಿಗೆ ಗೌರವ ನೀಡುವ, ಸ್ಮರಿಸುವ ಕೆಲಸ ಆಗಬೇಕು.ನಾವೆಲ್ಲರೂ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದೆವೆ ಎಂದರೆ, ಅದಕ್ಕೆ ಗಡಿಯಲ್ಲಿ ಕಷ್ಟಪಟ್ಟು ದೇಶ ರಕ್ಷಣೆ ಮಾಡುತ್ತಿರುವ ಸೈನಿಕರ ಶ್ರಮವೇ ಕಾರಣ ಎಂದರು.

ಮರತೂರಿನ ಶ್ರೀಶೈಲ ಮಹಾಸ್ವಾಮಿಗಳು ಮಾತನಾಡಿ, ದೇಶ ಕಾಯುವ ಯೋಧರು ತಂದೆ, ತಾಯಿ, ಪತ್ನಿ ಸೇರಿದಂತೆ ಕುಟುಂಬದವರಿಂದ ದೂರವಿದ್ದು, ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸುತ್ತಾರೆ. ಗಡಿಯಲ್ಲಿ ಮೈನಸ್ ನಲವತ್ತು ಡಿಗ್ರಿ ಸೆಲ್ಸಿಯಸ್ ವಾತಾವರಣದಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ಊಟ, ತಿಂಡಿ, ನಿದ್ದೆ ಇವುಗಳ ಹಂಗೇ ಇರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ದೇಶದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಾಳಾದ ಗುರುಮೂರ್ತಿ ಶಿವಾಚಾರ್ಯರು, ಗಣ್ಯರಾದ ಅಜಿತಕುಮಾರ ಪಾಟೀಲ, ಶಾಮರಾಯಗೌಡ, ಗುರುನಾಥ ಕಂಬಾ, ರವಿ ನರೋಣಿ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420