ಬಿಸಿ ಬಿಸಿ ಸುದ್ದಿ

ವಿವಿಧೆಡೆ 75ನೇ ಸ್ವಾತಂತ್ರ್ಯ ದಿನಾಚರಣೆ:  ಅನೇಕರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ದೊರೆತಿದೆ: -ಶಾಸಕ ರಾಜುಗೌಡ

ಸುರಪುರ: ಅನೇಕ ಮಹನಿಯರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಎಲ್ಲರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗು ಶಾಸಕ ನರಸಿಂಹ ನಾಯಕ (ರಾಜುಗೌಡ) ಮಾತನಾಡಿದರು.

ನಗರಸಭೆ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ,ಇಂದಿನ ಅನೇಕರಿಗೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನಿಯರ ಬಗ್ಗೆ ಗೊತ್ತಿಲ್ಲ ಆದ್ದರಿಂದ ಸ್ವಾತಂತ್ರ್ಯ ದಿನದ ಮಹತ್ವವನ್ನು ಎಲ್ಲರು ಅರಿತುಕೊಳ್ಳಬೇಕು ಎಂದರು.ಅಲ್ಲದೆ ಜವಾಹಾರಲಾಲ ನೆಹರು ಅವರಾಗಲಿ,ಇಂದಿರಾಗಾಂಧಿಯವರಾಗಲಿ ಮತ್ತು ಅಟಲ್ ಬಿಹಾರಿ ವಾಜಪೇಯಿಯವರಾಗಲಿ ಅವರೆಲ್ಲ ದೇಶಕಂಡ ಮಹನಿಯರು ಅಂತವರ ಬಗ್ಗೆ ಹಗುರವಾಗಿ ಮಾತನಾಡುವುದು ಯಾವ ರಾಜಕಾರಣಿಗೂ ಶೋಭೀಸುವುದಿಲ್ಲ.ಆದರೆ ಕೆಲವರು ಇವರ ಬಗ್ಗೆ ಮಾತನಾಡುವುದಕ್ಕೆ ನಾನು ವಿರೋಧಿಸುವುದಾಗಿ ತಿಳಿಸಿದರು.ಎಲ್ಲರು ದೇಶಪ್ರೇಮವನ್ನು ದೇಶಕಂಡ ಮಹಾನ್ ವ್ಯಕ್ತಿಗಳ ಬಗ್ಗೆ ಗೌರವ ಮತ್ತು ಪ್ರೀತಿಯನ್ನು ಬೆಳೆಸಿಕೊಳ್ಳೋಣ ಎಂದರು.ಹಾಗು ಶೀಘ್ರದಲ್ಲಿಯೆ ಸುರಪುರ ನಗರಕ್ಕೆ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ ಧ್ವಜಾರೋಹಣ ನೆರವೇರಿಸಿದರು.ಉಪಾಧ್ಯಕ್ಷ ಮಹೇಶ ಪಾಟೀಲ್,ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ (ತಾತಾ) ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಸೇರಿದಂತೆ ಎಲ್ಲಾ ಸದಸ್ಯರು ಮತ್ತು ಅನೇಕ ಮುಖಂಡರು ಹಾಗು ನಗರಸಭೆ ಸಿಬ್ಬಂದಿಗಳು ಭಾಗವಹಿಸಿದ್ದರು.

ತಹಸೀಲ್ ಕಚೇರಿ ಆವರಣ: ನಗರದ ತಹಸೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದಿಂದ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಧ್ವಜಾರೋಹಣ ನೆರವೇರಿಸಿದರು.

ಶಾಸಕ ರಾಜುಗೌಡ,ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ,ಗ್ರೇಡ-2 ತಹಸೀಲ್ದಾರ್ ಸೂಫಿಯಾ ಸುಲ್ತಾನ,ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಡಿವೈಎಸ್ಪಿ ವೆಂಕಟೇಶ ಉಗಿಬಂಡಿ,ತಾ.ಪಂ ಇಒ ಅಂಬ್ರೇಶ,ಬಿಇಒ ಮಹಾದೇವರಡ್ಡಿ,ಅಕ್ಷರದಾಸೋಹದ ಎಡಿ ಮೌನೇಶ ಕಂಬಾರ,ಪಿಐ ಸುನೀಲಕುಮಾರ ಮೂಲಿಮನಿ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಅನೇಕ ಮುಖಂಡರು ಭಾಗವಹಿಸಿದ್ದರು.

ಮಹಾತ್ಮ ಗಾಂಧಿ ವೃತ್ತ: ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಗರಸಭೆಯಿಂದ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕ ರಾಜುಗೌಡ, ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್,ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ (ತಾತಾ) ಸದಸ್ಯರಾದ ವೇಣುಮಾಧವ ನಾಯಕ,ಎಪಿಎಮ್‍ಸಿ ಅಧ್ಯಕ್ಷ ದುರ್ಗಪ್ಪ ಗೋಗಿಕೆರಿ,ನಗರಸಭೆ ಅನೇಕ ಸದಸ್ಯರು ಮತ್ತು ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಹಾಗು ಶ್ರೀ ಜನನಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗು ಉಪನ್ಯಾಸಕರು ಆಜಾದಿ ಅಮೃತ ಮಹೋತ್ಸವ ಮೆರವಣಿಗೆ ನಡೆಸಿ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಡಾ:ಬಿ.ಆರ್.ಅಂಬೇಡ್ಕರ ವೃತ್ತ: ನಗರದ ಬಸ್ ನಿಲ್ದಾಣದ ಬಳಿಯ ಡಾ:ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿಯಲ್ಲಿ ನಗರಸಭೆಯಿಂದ 75ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.ಶಾಸಕ ರಾಜುಗೌಡ ಹಾಗು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಅಂಬೇಡ್ಕರ್‍ರ ಮೂರ್ತಿಗೆ ಬೃಹತ್ ಗಾತ್ರದ ಮಾಲಾರ್ಪಣೆ ಮಾಡಿ ವಂದಿಸಿದರು.ನಗರಸಭೆ ಅಧ್ಯಕ್ಷೆ ಸುಜಾತಾ ವಿ.ಜೇವರ್ಗಿ ಧ್ವಜಾರೋಹಣ ನೆರವೇರಿಸಿದರು.ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್, ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ (ತಾತಾ) ಸೇರಿದಂತೆ ಎಲ್ಲಾ ಸದಸ್ಯರು ಹಾಗು ಸಿಬ್ಬಂದಿಗಳಿದ್ದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

56 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago