ಬೀದರ : ಮಂಗಳವಾರ ಕಲ್ಯಾಣ ಕರ್ನಾಟಕ ಪ್ರದೇಶ ಮತ್ತು ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕುರಿತು ವಿಚಾರ ಸಂಕಿರಣವನ್ನು ಬೀದರ ನಗರದ ಮೈಲೂರು ವೃತ್ತದ ಮಹಾಲಕ್ಷ್ಮೀ ಸಭಾಂಗಣದಲ್ಲಿ ನಿಯೋಜಿಸಲಾಗಿದೆ.
ವಿಚಾರ ಸಂಕಿರಣಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಬಂಡೆಪ್ಪ ಕಾಶೆಂಪೂರ್, ರಹೀಂ ಖಾನ್, ಚನ್ನಬಸಪ್ಪ ಹಾಲಹಳ್ಳಿ, ಅಬ್ದುಲ ಖದೀರ್, ದೇವಿಂದ್ರ ಕಮಲ್, ಡಾ. ಆನಂದರಾವ್ ಭಾಗವಹಿಸುತ್ತಿದ್ದಾರೆ. ವಿಚಾರ ಸಂಕಿರಣದ ಉದ್ಘಾಟನೆಯನ್ನು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ, ಲಕ್ಷ್ಮಣ ದಸ್ತಿಯವರು ನೆರವೇರಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಬೀದರ ಜಿಲ್ಲಾ ಘಟಕದ ಅಧ್ಯಕ್ಷರಾದ ಅನಂತರೆಡ್ಡಿ ನರಸಾರೆಡ್ಡಿರವರು ವಹಿಸಲಿದ್ದಾರೆ.
ಈ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ವಿಶೆಷ ಆಹ್ವಾನಿತರಾಗಿ, ಮನೀಷ್ ಜಾಜು, ಡಾ. ಮಾಜಿದ ದಾಗಿ, ಇಸ್ಮಾಯಿಲ ಉಲ್ಲಾ ಸಾಹಬ್, ಲಿಂಗರಾಜ ಸಿರಗಾಪೂರ, ಡಾ. ಎ.ಎಸ್. ಭದ್ರಶೆಟ್ಟಿ, ಶಿವಲಿಂಗಪ್ಪ ಬಂಡಕ್, ಮೊ.ಮಿರಾಜೋದ್ದೀನ್, ಜ್ಞಾನಮಿತ್ರ ಸ್ಯಾಮ್ಯೂವೆಲ್ ಭಾಗವಹಿಸಲಿದ್ದಾರೆ.
ಈ ಮಹತ್ವದ ವಿಷಯದ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ಬೀದರ ಜಿಲ್ಲೆಯ ಬುದ್ಧಿ ಜೀವಿಗಳು, ಚಿಂತಕರು, ಕಲ್ಯಾಣ ಕರ್ನಾಟಕ ಅಭಿವೃದ್ಧಿಪರ ಸಾಮಾಜಿಕ ಕಾರ್ಯಕರ್ತರು, ಎಲ್ಲಾ ಕ್ಷೇತ್ರದ ಗಣ್ಯರು ಹಾಗೂ ಸಮಿತಿಯ ಎಲ್ಲಾ ಕ್ರೀಯಾ ಸದಸ್ಯರು ಭಾಗವಹಿಸಬೇಕೆಂದು ಸಮಿತಿಯ ವಕ್ತಾರರಾದ ರೋಹನಕುಮಾರ ರವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…